
ಪಣಜಿ : ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಬಯಸುತ್ತಿದ್ದಾರೆ. ಆದರೆ ಬಿಜೆಪಿ ಹೈ ಕಮಾಂಡ್ ಇದನ್ನು ನಿರಾಕರಿಸುತ್ತಿದೆ ಎಂದು ಗೋವಾ ಕೃಷಿ ಸಚಿವರಾದ ವಿಜಯ್ ಸರ್ದೇಸಾಯಿ ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನವನ್ನು ತ್ಯಜಿಸುವ ಯೋಚನೆ ಅವರಲ್ಲಿದೆ. ಅಲ್ಲದೇ ಅವರ ಬಳಿ ಇರುವ ಇತರ ಖಾತೆಗಳನ್ನು ಬಿಟ್ಟುಕೊಡುವುದು ಅವರ ನಿರ್ಧಾರವಾಗಿದೆ. ಆಸ್ಪತ್ರೆಗೆ ಸೇರಿದಾಗಲೆ ಈ ಬಗ್ಗೆ ನಿರ್ಧರಿಸಿದ್ದರು ಎಂದು ಸರ್ದೇಸಾಯಿ ಹೇಳಿದ್ದಾರೆ.
ಸದ್ಯ ಗೋವಾ ರಾಜಕೀಯದಲ್ಲಿ ಅನೇಕ ರೀತಿಯ ಘಟನೆಗಳು ಸಂಭವಿಸುತ್ತಿದೆ. ಆದರೆ ನಿರ್ಧಾರ ತೆಗೆದುಕೊಂಡು ಅದನ್ನು ಕಾರ್ಯರೂಪಕ್ಕೆ ತರುವುದು ಅವರ ಕೈಯಲ್ಲಿ ಇಲ್ಲ. ಇದಕ್ಕೆ ಬಿಜೆಪಿ ಹೈಕಮಾಂಡ್ ನಿಂದ ಒಪ್ಪಿಗೆ ದೊರೆಯುತ್ತಿಲ್ಲ ಎಂದಿದ್ದಾರೆ.
ಇನ್ನು ಸ್ವತಂತ್ರ ಶಾಸಕ ಹಾಗೂ ಕಂದಾಯ ಸಚಿವ ರೋಹನ್ ಕೌಂಟಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಪರಿಕ್ಕರ್ ಅವರ ಅನಾರೋಗ್ಯದಿಂದಾದ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಂಠಿತಗಗೊಂಡಿದೆ ಎಂದಿದ್ದಾರೆ.
62 ವರ್ಷದ ಪರಿಕ್ಕರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಏಮ್ಸ್ ಗೆ ದಾಖಲಾಗಿ ಅಲ್ಲಿಂದ ಅಕ್ಟೋಬರ್ 14ರಂದು ಡಿಶ್ಚಾರ್ಜ್ ಆಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ