ತಮಿಳ್ನಾಡಿಗೆ ನೀರು ಬಿಡುವುದು ಬೇಡ-ಮಂತ್ರಿ ಪರಿಷತ್ ಸಭೆಯಲ್ಲಿ ಒಮ್ಮತ

Published : Sep 21, 2016, 02:22 AM ISTUpdated : Apr 11, 2018, 12:35 PM IST
ತಮಿಳ್ನಾಡಿಗೆ ನೀರು ಬಿಡುವುದು ಬೇಡ-ಮಂತ್ರಿ ಪರಿಷತ್ ಸಭೆಯಲ್ಲಿ ಒಮ್ಮತ

ಸಾರಾಂಶ

`ಅನುಷ್ಠಾನ ಮಾಡಲು ಸಾಧ್ಯವಾಗದೇ ಇರುವ ತೀರ್ಪನ್ನ ಪಾಲಿಸದಿದ್ದರೆ ನ್ಯಾಯಾಂಗ ನಿಂದನೆಯಾಗುವುದಿಲ್ಲ'

ಬೆಂಗಳೂರು(ಸೆ.21): ತಮಿಳುನಾಡಿಗೆ ನೀರು ಬಿಡುವುದು ಬೇಡವೆಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮಂತ್ರಿ ಪರಿಷತ್ ಸಭೆಯಲ್ಲಿ ಒಕ್ಕೊರಲ ಕೂಗು ಕೇಳಿಬಂದಿದೆ. ಸಭೆ ಆರಂಭವಾಗುತ್ತಿದ್ದಂತೆ ಹಿರಿಯ ಸಚಿವರಾದ ರಮೇಶ್ ಕುಮಾರ್, ಟಿ.ಬಿ. ಜಯಚಂದ್ರ ನೀರು ಬಿಡುವುದು ಬೇಡ, ರಾಜ್ಯದ ಜನರ ಅಭಿಪ್ರಾಯ ಸಹ ಇದೇ ಆಗಿದೆ. ಕಠಿಣ ನಿರ್ಧಾರ ಕೈಗೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿಯಲ್ಲಿದ್ದೇವೆ  ಎಂದು ಒತ್ತಾಯಿಸಿದ್ದಾರೆ.

ಇದೇವೇಳೆ, ಸಚಿವ ಟಿ.ಬಿ. ಜಯಚಂದ್ರ ಒಂದು ತೀರ್ಪಿನ ಪ್ರತಿಯನ್ನ ಸಿಎಂ ಮುಂದಿಟ್ಟರು. ಅದು ನಿನ್ನೆಯಷ್ಟೇ ನ್ಯಾ. ಉದಯ್ ಲಲಿತ್ ಇನ್ನೊಂದು ಪ್ರಕರಣದಲ್ಲಿ ನೀಡಿದ್ದ ತೀರ್ಪು. ಯಾರೇ ಆಗಲಿ ಅನುಷ್ಠಾನ ಮಾಡಲು ಸಾಧ್ಯವಾಗದೇ ಇರುವ ತೀರ್ಪನ್ನ ಪಾಲಿಸದಿದ್ದರೆ ನ್ಯಾಯಾಂಗ ನಿಂದನೆಯಾಗುವುದಿಲ್ಲ ಎಂದು ತಿಳಿಸಿದರು. ಈ ಅಭಿಪ್ರಾಯಕ್ಕೆ ಎಲ್ಲ ಸಚಿವರು ಸಹಮತ ಸೂಚಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಟಿಕೆಟ್‌ ದರ ಅಲ್ಪ ಹೆಚ್ಚಳ
ಫಾಸ್ಟ್ಯಾಗ್‌ ದಂಡದಲ್ಲಿ ಕರ್ನಾಟಕ ನಂ.1