ತುಂಬುತ್ತಿವೆ ರಾಜ್ಯದ ಡ್ಯಾಂಗಳು ಎಚ್ಚರ

Published : Jul 12, 2018, 08:33 AM IST
ತುಂಬುತ್ತಿವೆ ರಾಜ್ಯದ ಡ್ಯಾಂಗಳು ಎಚ್ಚರ

ಸಾರಾಂಶ

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಾರಂಗಿ ಮತ್ತು ಕಬಿನಿ ಜಲಾಶಯಗಳು ಸಂಪೂರ್ಣ ಭರ್ತಿಯಾಗುತ್ತಿದ್ದು, ಹೆಚ್ಚಿನ ಪ್ರಮಾಣದ ನೀರನ್ನು ನದಿಗಳಿಗೆ ಹರಿಸಲಾಗುತ್ತಿರುವುದರಿಂದ ನದಿಪಾತ್ರದ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಆಯಾ ಜಿಲ್ಲಾಡಳಿತಗಳಿಗೆ ಸರ್ಕಾರ ಸೂಚನೆ ನೀಡಿದೆ.

ಬೆಂಗಳೂರು :  ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಾರಂಗಿ ಮತ್ತು ಕಬಿನಿ ಜಲಾಶಯಗಳು ಸಂಪೂರ್ಣ ಭರ್ತಿಯಾಗುತ್ತಿದ್ದು, ಹೆಚ್ಚಿನ ಪ್ರಮಾಣದ ನೀರನ್ನು ನದಿಗಳಿಗೆ ಹರಿಸಲಾಗುತ್ತಿರುವುದರಿಂದ ನದಿಪಾತ್ರದ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಆಯಾ ಜಿಲ್ಲಾಡಳಿತಗಳಿಗೆ ಸರ್ಕಾರ ಸೂಚನೆ ನೀಡಿದೆ.

ನದಿಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿರುವುದರಿಂದ ಆಯಾ ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ನದಿ ಪಾತ್ರದಲ್ಲಿ ಮನರಂಜನಾ ಚಟುವಟಿಕೆಗಳನ್ನು ಮುಂಗಾರು ಅವಧಿ ಮುಗಿಯುವವರೆಗೆ ನಿಷಿದ್ಧಗೊಳಿಸಬೇಕು. ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ನದಿಗೆ ಇಳಿಯಲು, ಈಜುವುದಕ್ಕೆ ಅವಕಾಶ ನೀಡಬಾರದು. ಇದನ್ನು ತಡೆಯಲು ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಗಂಗಾರಾಂ ಬಡೇರಿಯಾ ಜಿಲ್ಲಾಧಿಕಾರಿಗಳು, ತಹಶೀಲ್ದಾರರು ಹಾಗೂ ಸಹಾಯಕ ಆಯುಕ್ತರುಗಳಿಗೆ ಸೂಚನೆ ನೀಡಿದ್ದಾರೆ.

ಪಶ್ಚಿಮಘಟ್ಟಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಕಬಿನಿ ಜಲಾಶಯ ಭರ್ತಿಯಾಗಲು 1.78 ಅಡಿಯಷ್ಟೇ ಬಾಕಿ ಇದ್ದು, ಜಲಾಶಯದಿಂದ 39,667 ಕ್ಯೂಸೆಕ್‌ನಷ್ಟುನೀರನ್ನು ನದಿಗೆ ಹರಿಸಲಾಗುತ್ತಿದೆ. ಹಾರಂಗಿ ಜಲಾಶಯದ ಭರ್ತಿಗೆ 1.55 ಅಡಿಯಷ್ಟೇ ಬಾಕಿ ಇದ್ದು 12,388 ಕ್ಯೂಸೆಕ್‌ನಷ್ಟುನೀರನ್ನು ನದಿಗೆ ಹರಿಸಲಾಗುತ್ತಿದೆ. ಕೆಆರ್‌ಎಸ್‌ ಜಲಾಶಯದ ಒಳಹರಿವು 35,689 ಕ್ಯೂಸೆಕ್‌ಗೆ ಏರಿಕೆಯಾಗಿದೆ. ಹೇಮಾವತಿ ಜಲಾಶಯಕ್ಕೆ 20,535 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಹಾಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.

ಆಲಮಟ್ಟಿಗೆ 68 ಸಾವಿರ ಕ್ಯೂಸೆಕ್‌ ಒಳಹರಿವು:  ಕಳೆದ ಮೂರು ದಿನಗಳಿಂದ ಕೃಷ್ಣ, ಭೀಮಾ ಮತ್ತು ತುಂಗಭದ್ರಾ ನದಿ ಜಲಾನಯನ ಪ್ರದೇಶಗಳಲ್ಲಿ ಭಾ ಮಳೆಯಾಗಿದೆ. ಇದರಿಂದ ಆಲಮಟ್ಟಿಜಲಾಯಶಯದ ಒಳಹರಿವು 68,500 ಸಾವಿರ ಕ್ಯೂಸೆಕ್‌ ದಾಟಿದೆ. ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಬಳ್ಳಾರಿ ಭಾಗಗಳಲ್ಲಿ ತುಂಗಭದ್ರಾ ನದಿ ನೀರಿನ ಪ್ರಮಾಣ ಹೆಚ್ಚಾಗಲಿದೆ. ಜಿಲ್ಲಾಡಳಿತಗಳು ನದಿ ಪಾತ್ರದ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು ಎಂದು ಪ್ರಕಟಣೆಯಲ್ಲಿ ಸೂಚನೆ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಟ್ಕಳ ತಹಸೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ: ಇಮೇಲ್‌ನಲ್ಲಿ ಡಿಎಂಕೆ ವಿರುದ್ಧ ಅಸಂಬದ್ಧ ಆರೋಪ
ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ : ನಾಲ್ವರು ಬೆಂಕಿಗಾಹುತಿ