
ವಿಜಯಪುರ : ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಇದೇ ಬೆನ್ನಲ್ಲೇ ಹಲವು ಮುಖಂಡರಿಂದ ಅಸಮಾಧಾನ ಭುಗಿಲೇಳುತ್ತಿದೆ.
ಈ ನಿಟ್ಟಿನಲ್ಲಿ ಅಸಮಾಧಾನದಿಂದಲೇ ಮೈತ್ರಿ ಸರ್ಕಾರ ಸಮಸ್ಯೆ ಎದುರಿಸಲಿದೆ ಎಂದು ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಯಾರೂ ನಂಬಲಾರದಷ್ಟು ಸಂಖ್ಯೆಯಲ್ಲಿ ಮೈತ್ರಿ ಸರ್ಕಾರದಿಂದ ಶಾಸಕರು ಹೊರಗೆ ಬರುತ್ತಾರೆ. ಹೊರಗೆ ಬರುವವರ ಲಿಸ್ಟ್ ನಲ್ಲಿ ಯಾವ ಕ್ಷೇತ್ರದವರಿದ್ದಾರೆ ಎನ್ನುವುದು ಗೊತ್ತಿಲ್ಲ.ವಿಜಯಪುರ, ಮೈಸೂರು, ಕೋಲಾರ ಯಾವ ಶಾಸಕರೂ ಇರಬಹುದು ಎಂದರು.
ಮೈತ್ರಿ ಸರ್ಕಾರ ಭದ್ರವಾಗಿದೆ ಎನ್ನುವುದು ಮೂರ್ಖತನದ ಹೇಳಿಕೆಯಾಗಿದೆ. ಸಿಎಂ ಕುಮಾರಸ್ವಾಮಿ ಕೆಟ್ಟ ಸರ್ಕಾರ ನಡೆಸುವುದಕ್ಕಿಂತ ರಾಜೀನಾಮೆ ನೀಡಲಿ. ಅವರ ಗೌರವ, ಸ್ವಾಭಿಮಾನ ಉಳಿಯಬೇಕೆಂದರೆ ರಾಜ್ಯಪಾಲರಿಗೆ ರಾಜೀನಾಮೆ ನೀಡಲಿ.
ಕೆಟ್ಟ ಹಗರಣ, ಜಗಳ, ಅಭಿವೃದ್ಧಿ ಇಲ್ಲದ ಸರ್ಕಾರ ಆದಷ್ಟು ಬೇಗ ಹೊರಗೆ ಹೋಗಲಿ ಎಂದು ಬಸನಗೌಡ ಪಾಟೀಲ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.