
ಬಳ್ಳಾರಿ(ಫೆ.21): ಚಕ್ರದ ಅಚ್ಚು ಮುರಿದ ಕಾರಣ 60 ಅಡಿ ಉದ್ದದ ರಥ ಕುಸಿದು ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆ ಕೂಡ್ಲಗಿ ತಾಲೂಕಿನ ಕೊಟ್ಟೂರು ಗ್ರಾಮದಲ್ಲಿ ನಡೆದಿದೆ.ಕೊಟ್ಟೂರಿನಲ್ಲಿ ಅದ್ದೂರಿಯಾಗಿ ನಡೆಯುತ್ತಿದ್ದ ಗುರುಬಸವೇಶ್ವರ ರಥೋತ್ಸವದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ರಥದ ಕೆಳಗೆ ಹಲವಾರು ಮಂದಿ ಸಿಲುಕಿರುವ ಸಾಧ್ಯತೆಯಿದೆ. ಮೂಲ ನಕ್ಷತ್ರದ ದಿನದಂದು ಈ ಜಾತ್ರೆ ನಡೆಯುತ್ತದೆ. ಈ ರಥಕ್ಕೆ ತೇರು ಕಟ್ಟುವ ಕಟ್ಟುವ ಕೆಲಸ 15 ದಿನಗಳಿಂದ ಶುರುವಾಗುತ್ತದೆ. 6 ಲಕ್ಷಕ್ಕೂ ಹೆಚ್ಚು ಜನರುಈ ಜಾತ್ರೆಯಲ್ಲಿ ಸೇರುತ್ತಾರೆ.
ರಥದ ಕೆಳಗಡೆ ಸಿಲುಕಿರುವ ಭಕ್ತರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಗೊಂಡವರನ್ನು ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.