
ನವದೆಹಲಿ (ಜ.07): ಉತ್ತರ ಪ್ರದೇಶ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸಂಪೂರ್ಣ ಬಹುಮತದೊಂದಿಗೆ ಗೆಲುವನ್ನು ಸಾಧಿಸಲಿದ್ದಾರೆ ಎಂದು ಸುಪ್ರೀಂಕೋರ್ಟ್ ಮಾಜಿ ನ್ಯಾ. ಮಾರ್ಕಂಡೇಯ ಕಾಟ್ಜು ಹೇಳಿದ್ದಾರೆ.
ಬಿಜೆಪಿ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ಮಾಡಲಿದೆ. ಬಿಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸಂಪೂರ್ಣ ಬಹುಮತದೊಂದಿಗೆ ಚುನಾವಣೆಯಲ್ಲಿ ಗೆಲ್ಲಲಿದ್ದಾರೆ ಎಂದು ಕಾಟ್ಜು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಉತ್ತರ ಪ್ರದೇಶ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಜಾತಿ ಮತ್ತು ಧರ್ಮದ ಆಧಾರದ ಮೇಲೆ ಚುನಾವಣಾಗ ಗೆಲುವು ನಿರ್ಧಾರವಾಗುತ್ತದೆ. 2014 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೋದಿ ಅಲೆಯಲ್ಲಿ ಗೆಲುವನ್ನು ಪಡೆದುಕೊಂಡಿತು. ಆದರೆ ಈಗ ಅಲೆ ಹರಿಯುವುದಿಲ್ಲ. ನೋಟು ಅಮಾನ್ಯವು ಒಂದು ಅಲೆಯನ್ನು ಸೃಷ್ಟಿಸಿರಬಹುದು. ಆದರೆ ಉತ್ತರ ಪ್ರದೇಶ ಚುನಾವಣೆಯಲ್ಲಿ ಯಶಸ್ಸನ್ನು ಗಳಿಸುವುದಿಲ್ಲವೆಂದು ಕಾಟ್ಜು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.