
ನವದೆಹಲಿ(ಸೆ.10) ವಿಶ್ವದ ಅತಿ ಎತ್ತರದ ಪ್ರತಿಮೆ ಎಂಬ ಖ್ಯಾತಿಗೆ ಪಾತ್ರವಾಗಲಿರುವ ಏಕತೆಯ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 31ರಂದು ಲೋಕಾರ್ಪಣೆ ಮಾಡಲಿದ್ದಾರೆ.
182 ಮೀಟರ್ ಎತ್ತರದ ಈ ಪ್ರತಿನೆಯು ದೇಶದ ಏಕತೆ ಮತ್ತು ಸಮಗ್ರತೆಯ ಚಿಹ್ನೆಯಾಗಿದ್ದು, ಇದನ್ನು ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಜನ್ಮದಿನಾಚರಣೆಯೆಂದು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರು ತಿಳಿಸಿದ್ದಾರೆ.
2013ರಲ್ಲಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ಸರ್ದಾರ್ ವಲ್ಲಭ್ ಭಾಯ್ ಪಟೇಲ್ ರ ಪ್ರತಿಮೆ ಸ್ಥಾಪನೆ ಮಾಡುವ ಘೋಷಣೆ ಮಾಡಿದ್ದರು. ಅಲ್ಲದೆ ಪ್ರತಿಮೆ ನಿರ್ಮಾಣಕ್ಕೆ ದೇಶದಾದ್ಯಂತ ಕಬ್ಬಿಣ, ಮರಳು ಮತ್ತು ನೀರನ್ನು ಸಂಗ್ರಹಿಸಿದ್ದರು. ನಾಗರಿಕರು ಇದಕ್ಕೆ ಸ್ಪಂದಿಸಿದ್ದರು.
ನರೇಂದ್ರ ಮೋದಿ ಅವರು ಇದನ್ನು ಘೋಷಣೆ ಮಾಡಿದಾಗ ವಿಪಕ್ಷಗಳ ಟೀಕೆಗೂ ಗುರಿಯಾಗಿದ್ದರು. ಭಾರತದ ಮೊದಲ ಗೃಹ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಪಟೇಲ್ ಅವರ ಚಿಂತನೆಗಳನ್ನು ಜೀವಂತವಾಗಿಡಲು ಈ ಪ್ರತಿಮೆಯನ್ನು ಆದರ್ಶವಾಗಿ ಇಟ್ಟುಕೊಳ್ಳಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.