
ಬೆಂಗಳೂರು (ಡಿ.05): ಮಾಜಿ ಶಾಸಕ ಶಿವರಾಮೇಗೌಡರಿಂದ ಮದುವೆ ಮುರಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ನೊಂದ ಯುವತಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಯುವತಿಗೆ ಆದ ಅನ್ಯಾಯದ ಬಗ್ಗೆ ನಾಗಲಕ್ಷ್ಮೀ ಬಾಯಿ ಮಾಹಿತಿ ಪಡೆದಿದ್ದಾರೆ.
ಈ ಬಗ್ಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಭದ್ರಾವತಿ ಪೊಲೀಸ್ ಇನ್ಸ್ಪೆಕ್ಟರ್'ಗೆ ನಾಗಲಕ್ಷ್ಮೀ ಬಾಯಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಎಫ್ಐಆರ್ ದಾಖಲಿಸಿ ತಿಂಗಳಾದರೂ ಯಾಕೆ ಕ್ರಮಕೈಗೊಂಡಿಲ್ಲ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಶಿವಮೊಗ್ಗ ಎಸ್ಪಿ ಅವರಿಂದಲೂ ಮಾಹಿತಿ ಪಡೆದ ನಾಗಲಕ್ಷ್ಮೀ ಬಾಯಿ ಕೂಡಲೇ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮೋಸ ಮಾಡಿದ ಯುವಕ ಹಾಗೂ ಕುಟುಂಬಸ್ಥರಿಗೆ ನೋಟಿಸ್ ನೀಡಲು ಸೂಚನೆ ನೀಡಿದ್ದು ಡಿ.12 ರಂದು ಆಯೋಗದ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ. ಒಂದು ವೇಳೆ ಯುವಕ ಮದುವೆ ಒಪ್ಪದೇ ಇದ್ದಲ್ಲಿ ಕಾನೂನು ಕ್ರಮ ನಿಶ್ಚಿತ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.