
ನವದೆಹಲಿ[ಜು.18] ಮದುವೆಯಾಗಿರುವ ಕಾರಣಕ್ಕಾಗಿ ಪತಿ ಜತೆ ಪತ್ನಿ ದೈಹಿಕ ಸಂಪರ್ಕ ಹೊಂದಲು ಸಿದ್ಧವಾಗಿರಬೇಕಾಗಿಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೇ ಒತ್ತಾಯದ ಬೇಡಿಕೆಯನ್ನು ಅತ್ಯಾಚಾರ ಎಂದು ಪರಿಭಾವಿಸಬಹುದು ಎಂದು ಹೇಳಿದೆ’.
ಪ್ರಭಾರ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಮತ್ತು ನ್ಯಾ.ಸಿ.ಹರಿಶಂಕರ್ ನೇತೃತ್ವದ ಪೀಠ ಮಂಗಳವಾರ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ಮದುವೆ ಎಂಬ ಸಂಬಂಧದಲ್ಲಿ ಪತಿ ಅಥವಾ ಪತ್ನಿಗೆ ದೈಹಿಕ ಸಂಬಂಧ ಬೇಡ ಎನ್ನುವ ಹಕ್ಕಿದೆ. ಸಮಾಗಮಕ್ಕೆ ಪತ್ನಿಯಾದವಳು ಯಾವತ್ತೂ ಸಿದ್ಧವಾಗಿಯೇ ಇರಬೇಕು ಎಂಬ ನಿಯಮವಿಲ್ಲ. ಪರಸ್ಪರರಲ್ಲಿ ಸಮ್ಮತಿ ಇರಬೇಕಾಗುತ್ತದೆ ಎಂದು ಹೇಳಿದೆ.
ಮದುವೆ ನಂತರದ ಒತ್ತಡದ ಲೈಂಗಿಕ ಸಂಪರ್ಕವನ್ನು ಅತ್ಯಾಚಾರ ಎಂದು ಪರಿಭಾವಿಸಬಹುದೆ? ಎಂಬ ವಿಚಾರದ ಕುರಿತಾಗಿ ಪರ ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿದ್ದು. ಹರಿಯಾಣ ಮೂಲದ ಎನ್ ಜಿಒ ಒಂದು ನ್ಯಾಯಾಲಕ್ಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.