ಗುರು ಕುಟುಂಬಕ್ಕೆ ಒಂದೇ ದಿನ 10 ಲಕ್ಷ ಪರಿಹಾರ

Published : Feb 21, 2019, 10:49 AM ISTUpdated : Feb 21, 2019, 10:51 AM IST
ಗುರು ಕುಟುಂಬಕ್ಕೆ ಒಂದೇ  ದಿನ 10 ಲಕ್ಷ ಪರಿಹಾರ

ಸಾರಾಂಶ

ಪುಲ್ವಾಮಾ ದಾಳಿಯಲ್ಲಿ ಹುತಾತ್ಮನಾದ ಮಂಡ್ಯ ಯೋಧ ಗುರು ಕುಟುಂಬಕ್ಕೆ ನೆರವಿನ ಮಹಾಪೂರವೇ ಹರಿದು ಬಂದಿದೆ. ಸಾವಿರಾರು ಜನ ಗುರು ಕುಟುಂಬಕ್ಕೆ ಧನ ಸಹಾಯ ಮಾಡಿದ್ದಾರೆ. 

ಮಂಡ್ಯ (ಫೆ. 21):  ಹುತಾತ್ಮ ಯೋಧ ಗುರು ಕುಟುಂಬಕ್ಕೆ ನೆರವಿನ ಮಹಾಪೂರವೇ ಹರಿದು ಬರುತ್ತಿದ್ದು, ಬುಧವಾರ ಒಂದೇ ದಿನ 10 ಲಕ್ಷಕ್ಕೂ ಹೆಚ್ಚಿನ ಪರಿಹಾರ ದೊರೆತಿದೆ.

ಮದ್ದೂರು ತಾಲೂಕಿನ ಗುಡಿಗೆರೆ ಕಾಲೋನಿಯಲ್ಲಿರುವ ಗುರು ನಿವಾಸಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಗುರು ಅವರ ಪತ್ನಿ ಕಲಾವತಿ, ತಾಯಿ ಚಿಕ್ಕತಾಯಮ್ಮ ಹಾಗೂ ತಂದೆ ಹೊನ್ನಯ್ಯರಿಗೆ ಸಾಂತ್ವನ ಹೇಳಿದರು. ಕೆಪಿಸಿಸಿ ವತಿಯಿಂದ 5 ಲಕ್ಷ ಪರಿಹಾರ ನೀಡಿದರು. ಈ ವೇಳೆ ಮಾಜಿ ಶಾಸಕರಾದ ಚಲುವರಾಯಸ್ವಾಮಿ, ಪಿ.ನರೇಂದ್ರಸ್ವಾಮಿ, ಮಧು ಜಿ ಮಾದೇಗೌಡ ಸೇರಿದಂತೆ ಅನೇಕ ಮುಖಂಡರಿದ್ದರು.

ಇದೇ ವೇಳೆ ಮನ್‌ಮುಲ್‌ (ಮಂಡ್ಯ ಜಿಲ್ಲಾ ಹಾಲು ಒಕ್ಕೂಟ)ನಿಂದ 3 ಲಕ್ಷ, ಮಂಡ್ಯ ಜಿಲ್ಲಾ ಸಹಕಾರಿ ಬ್ಯಾಂಕ್‌ ವತಿಯಿಂದ .2 ಲಕ್ಷದ ಚೆಕ್‌ ಅನ್ನು ಹಸ್ತಾಂತರಿಸಲಾಯಿತು. ಅಲ್ಲದೇ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ ಜನತೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಾಂತ್ವನ ಹೇಳುವ ಜತೆಗೆ, ಸಾಕಷ್ಟುಧನಸಹಾಯ ಮಾಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದರು.

ಮಂಡ್ಯ ನಗರದಲ್ಲಿ ಗೋಪಿ ಮಂಚೂರಿ ವ್ಯಾಪಾರ ಮಾಡುವ ಉಪ್ಪಿ ಗೋವಿಂದು ತಮ್ಮ ಒಂದು ದಿನದ ಸಂಪಾದನೆ .10 ಸಾವಿರವನ್ನು ನೀಡಿದರು. ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆ ಸದಸ್ಯರು .50 ಸಾವಿರ ಧನ ಸಹಾಯ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಫ್ರೀಡಂ ಪಾರ್ಕ್‌ನಲ್ಲಿ ಕೈಗೆ ಕೋಳ ಹಾಕಿಕೊಂಡು 'STOP killing Men' ಪ್ರತಿಭಟನೆ ಮಾಡಿದ ಪುರುಷರು!
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ