
ನವದೆಹಲಿ (ಮಾ.10): ಐದು ವರ್ಷಗಳ ಸತತ ಕಾನೂನು ಹೋರಾಟದ ಬಳಿಕ ಮಾರುತಿ ಸುಜುಕಿ ಮಾನೇಸರ್ ಹಿಂಸಾಚಾರ ಪ್ರಕರಣದಲ್ಲಿ 31 ಮಂದಿಯನ್ನು ಹರ್ಯಾಣ ನ್ಯಾಯಾಲಯ ಅಪರಾಧಿಗಳು ಎಂದು ತೀರ್ಪು ನೀಡಿದೆ. 117 ಜನರನ್ನು ಖುಲಾಸೆಗೊಳಿಸಿದೆ.
ತೀರ್ಪು ನೀಡುವ ಮುನ್ನ ಗುರ್ಗಾಂವ್ ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. 9 ಮಂದಿ ಈಗಾಗಲೇ ಜೈಲುಶಿಕ್ಷೆ ಅನುಭವಿಸುತ್ತಿದ್ದು, 139 ಮಂದಿ ಜಾಮೀನಿನ ಮೇಲೆ ಹೊರಗಿದ್ದಾರೆ.
2012, ಜುಲೈ 18 ರಂದು ಮಾರುತಿ ಸುಜುಕಿ ಹಿಂಸಾಚಾರ ಘಟನೆ ನಡೆದಿದೆ. ಆಡಳಿತ ಮಂಡಳಿ ಹಾಗೂ ಕಾರ್ಮಿಕರ ನಡುವೆ ವಾಗ್ವಾದ ನಡೆದಿದೆ. ಇದು ವಿಕೋಪಕ್ಕೆ ತಿರುಗಿ ಕಾರ್ಮಿಕರು ಕಟ್ಟಡದ ಒಂದು ಫ್ಲೋರ್ ಗೆ ಬೆಂಕಿ ಹಚ್ಚಿದರು. ಇದರಲ್ಲಿ ಎಚ್ ಆರ್ ಜನರಲ್ ಮ್ಯಾನೇಜರ್ ಅವನೀಶ್ ಕುಮಾರ್ ದೇವ್ ಮೃತಪಟ್ಟು ಸಾಕಷ್ಟು ಮಂದಿ ಗಾಯಗೊಂಡಿದ್ದರು.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು 147 ಕಾರ್ಮಿಕರ ಮೇಲೆ ಚಾರ್ಜ್ ಶೀಟ್ ಹಾಕಿದ್ದರು.
ಸತತ 5 ವರ್ಷಗಳ ಕಾನೂನು ಹೋರಾಟದ ನಂತರ ಇವತ್ತು 31 ಮಂದಿಯನ್ನು ಅಪರಾಧಿಗಳು ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.