ರಾಜಧಾನಿಯಲ್ಲಿ ಪತ್ರಕರ್ತೆ ಮೇಲೆ ಮುಸುಕುಧಾರಿಗಳಿಂದ ಗುಂಡಿನ ದಾಳಿ

Published : Jun 23, 2019, 04:25 PM ISTUpdated : Jun 23, 2019, 04:28 PM IST
ರಾಜಧಾನಿಯಲ್ಲಿ ಪತ್ರಕರ್ತೆ ಮೇಲೆ ಮುಸುಕುಧಾರಿಗಳಿಂದ ಗುಂಡಿನ ದಾಳಿ

ಸಾರಾಂಶ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪತ್ರಕರ್ತೆ ಮೇಲೆ ಹಲ್ಲೆಯಾಗಿದೆ. ಮುಖಕ್ಕೆ ಮಾಸ್ಕ್ ಹಾಕಿಕೊಂಡ ಗುಂಪೊಂದು ಗುಂಡಿನ ದಾಳಿ ಮಾಡಿ ಮರೆಯಾಗಿದೆ.

ನವದೆಹಲಿ[ಜೂ. 23]  ಮುಖಕ್ಕೆ ಮಾಸ್ಕ್ ಹಾಕಿಕೊಂಡ ಅಪರಿಚಿತ ವ್ಯಕ್ತಿಗಳ ಗುಂಪೊಂದು ಮಧ್ಯರಾತ್ರಿ ಮಹಿಳಾ ಪತ್ರಕರ್ತೆಯ ಮೇಲೆ ಗುಂಡಿನ ದಾಳಿಮಾಡಿ ಹತ್ಯೆಗೆ ಯತ್ನಿಸಿದೆ.

ನವದೆಹಲಿಯ ವಸುಂಧರಾ ಎನ್‍ಕ್ಲೇವ್‍ನಲ್ಲಿ ಶನಿವಾರ ಮಧ್ಯರಾತ್ರಿ  12:30ರ ವೇಳೆ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ.  ನೋಯ್ಡಾ ನಿವಾಸಿ ಪತ್ರಕರ್ತೆ ಮಿತಾಲಿ ಚಂದೋಲಾ ಮೇಲೆ ಗುಂಡಿನ ದಾಳಿ ನಡೆದಿದೆ.

ಮನೆಯಲ್ಲೇ 'ಗನ್' ತಯಾರಿಸೋದು ಹೇಳಿಕೊಟ್ಟ ಮಹಿಳಾ IPS

ಮಿತಾಲಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಆಗ ಮಾರುತಿ ಸ್ವಿಫ್ಟ್ ಕಾರೊಂದು ಇದ್ದಕ್ಕಿದ್ದಂತೆ ಪತ್ರಕರ್ತೆಯ ಕಾರನ್ನು ಓವರ್ ಟೇಕ್ ಮಾಡಿ ಅಡ್ಡಹಾಕಿದೆ. ಬಳಿಕ ಮಾಸ್ಕ್ ಹಾಕಿಕೊಂಡಿದ್ದ ಕೆಲವು ಪುರುಷರು ಆಕೆಯ ಮೇಲೆ ಎರಡು ಬಾರಿ ಗುಂಡಿನ ದಾಳಿ ಮಾಡಿದ್ದು ಒಂದು ಗುಂಡು ಕಾರಿನ ಮುಂಭಾಗದ ವಿಂಡ್ ಷೀಲ್ಡ್ ಗೆ ತಾಕಿದೆ. ಇನ್ನೊಂದು ಗುಂಡು  ಪತ್ರಕರ್ತೆಯ ಕೈಗೆ ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಆದರೆ ಗುಂಡಿನ ದಾಳಿ ಮಾಡಿಲ್ಲ. ಮೊಟ್ಟೆಗಳನ್ನು ಎಸೆಯಲಾಗಿದೆ ಎಂದು ಪತ್ರಕರ್ತೆ ಹೇಳಿಕೆ ನೀಡಿರುವುದು ಸಹ ಅನುಮಾನಗಳಿಗೆ ಕಾರಣವಾಗಿದೆ.  ಪತ್ರಕರ್ತೆ ತನ್ನ ಕುಟುಂಬದೊಂದಿಗೆ ಉತ್ತಮ ಸಂಬಂಧ ಹೊಂದಿಲ್ಲ ಎಂಬ ವಿಚಾರ ಸಹ ಗೊತ್ತಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಾಟ್ಸಾಪ್ ಬಳಕೆದಾರರೇ ಎಚ್ಚರ: ಈ ಮೂರು ತಪ್ಪುಗಳು ಮಾಡಿದ್ರೆ ಜೈಲು ಪಾಲಾಗೋದು ಫಿಕ್ಸ್!
10 ಸಾವಿರವಲ್ಲ, 1 ಲಕ್ಷ ಕೊಟ್ರೂ ಮುಸ್ಲಿಮರು ನನಗೆ ವೋಟ್‌ ಹಾಕೋದಿಲ್ಲ: ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮ