
ಬೆಂಗಳೂರು(ನ.12): ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ಸಂಭವಿಸಿದ ದುರಂತಕ್ಕೆ ಸಂಬಂಧಿಸಿದಂತೆ ಸಾಹಸ ನಿರ್ದೇಶಕ ರವಿವರ್ಮ ಹಾಗೂ ನಿರ್ದೇಶಕ ನಾಗಶೇಖರ್ ಮಾಗಡಿ ಪೊಲೀಸರಿಗೆ ಶರಣಾಗಿದ್ದಾರೆ.
ಜಲಾಶಯದಲ್ಲಿ ನಡೆದ ದುರಂತ ಸಂಬಂಧ ಚಿತ್ರತಂಡದ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಪೊಲೀಸರು ಐಪಿಸಿ ಸೆಕ್ಷನ್ 188, 304, 34 ಅಡಿ ಚಿತ್ರ ತಂಡದ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಮೊದಲ ಆರೋಪಿಯಾಗಿ ಚಿತ್ರದ ನಿರ್ಮಾಪಕ ಸುಂದರ್ ಪಿ ಗೌಡ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಇನ್ನು 2ನೇ ಆರೋಪಿಯಾಗಿದ್ದ ನಿರ್ದೇಶಕ ನಾಗಶೇಖರ್, 4ನೇ ಆರೋಪಿಯಾಗಿದ್ದ ರವಿವರ್ಮಾ ಇವತ್ತು ಪೊಲೀಸರಿಗೆ ಶರಣಾಗಿದ್ದಾರೆ. ಆದ್ರೆ, 3ನೇ ಆರೋಪಿ ಸಹ ನಿರ್ದೇಶಕ ಸಿದ್ದು, ಹಾಗೂ ಯೂನಿಟ್ ಮ್ಯಾನೇಜರ್ ಭರತ್ ಇನ್ನೂ ತಲೆಮರೆಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.