
ಅಹಮದಾಬಾದ್: ಫೇಸ್ಬುಕ್ ಮೂಲಕ ಪರಿಚಯವಾಗಿ ಹಸೆಣಮಣೆ ಏರುವ ಸಂಬಂಧಗಳು ಕೊನೆವರೆಗೂ ಉಳಿಯುವುದಿಲ್ಲ ಎಂದು ಗುಜರಾತ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಅಲ್ಲದೆ, ನವದಂಪತಿಗೆ ವಿಚ್ಛೇದನ ಪಡೆಯುವಂತೆಯೂ ಕೋರ್ಟ್ ಸಲಹೆ ನೀಡಿದೆ. ಪತಿ ಜೈದೀಪ್ ಶಾ ಮತ್ತು ಅತನ ಕುಟುಂಬಸ್ಥರು ನನಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ನವವಧು ಫಾನ್ಸಿ ಶಾ ಅವರು ದೂರು ಸಲ್ಲಿಸಿದ್ದರು.
ಇದರ ವಿಚಾರಣೆ ನಡೆಸಿದ ಕೋರ್ಟ್, ಫೇಸ್ಬುಕ್ನಲ್ಲಿ ಪರಿಚಯವಾಗುವ ಸಂಬಂಧ ಶಾಶ್ವತವಾಗಿ ಉಳಿಯುವುದಿಲ್ಲ ಎಂಬುದಕ್ಕೆ ಇದೊಂದು ನಿದರ್ಶನ,’ ಎಂದು ಹೇಳಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.