
ಬೆಂಗಳೂರು : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೂಡಲಸಂಗಮ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಹಾಗೂ ಪ್ರಥಮ ಮಹಿಳಾ ಜಗದ್ಗುರು ಮಾತೆ ಮಹಾದೇವಿ (74) ಅವರು ತೀವ್ರ ಹೃದಯಾಘಾತದಿಂದ ಲಿಂಗೈಕ್ಯರಾದರು.
ಬಸವ ಪೀಠದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರು ಈ ಹಿಂದೆಯೇ ಸೂಚನೆ ನೀಡಿರುವಂತೆ ಜಗದ್ಗುರು ಮಾತೆ ಗಂಗಾದೇವಿ ಅವರನ್ನು ಉತ್ತರಾಧಿಕಾರಿಯಾಗಿ ಘೋಷಣೆ ಮಾಡಲಾಗಿದೆ.
ಮುಂದಿನ ವಿಧಿ- ವಿಧಾನಗಳನ್ನು ಗಂಗಾದೇವಿ ಅವರು ನಡೆಸಿಕೊಡುತ್ತಾರೆ ಎಂದು ಚೆನ್ನಬಸವೇಶ್ವರ ಜ್ಞಾನ ಪೀಠದ ಪೀಠಾಧ್ಯಕ್ಷ ಚೆನ್ನಬಸವಾನಂದ ಸ್ವಾಮೀಜಿ ಘೋಷಿಸಿದರು. ಈ ವೇಳೆ ಮಾತೆ ಮಹಾದೇವಿ ಅವರನ್ನು ನೆನೆದು ಮಾತನಾಡಿದ ಮಾತೆ ಗಂಗಾದೇವಿ ಕಣ್ಣೀರಿಟ್ಟರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.