
ನವದೆಹಲಿ: ಸಿಬಿಎಸ್ಇ 12ನೇ ತರಗತಿಯ ಗಣಿತ ಪ್ರಶ್ನೆ ಪತ್ರಿಕೆ ಒಂದು ದಿನದ ಮುಂಚೆ ಸೋರಿಕೆಯಾಗಿತ್ತು ಎಂಬ ಸುದ್ದಿಗಳು ಹರಿದಾಡುತ್ತಿವೆ.
3ನೇ ಪ್ರಶ್ನೆಪತ್ರಿಕೆ ಸೋರಿಕೆಯಾದ ಬಗ್ಗೆ ವಾಟ್ಸಪ್ ವಿಡಿಯೋವೊಂದು ಲಭ್ಯ ವಾಗಿದೆ. ಈ ಹಿನ್ನೆಲೆಯಲ್ಲಿ ಈ ಆರೋಪ ಮತ್ತು ವಿಡಿಯೋ ಕುರಿತು ತನಿಖೆ ನಡೆಸುವುದಾಗಿ ದೆಹಲಿಯ ಕ್ರೈಬ್ರ್ಯಾಂಚ್ ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಆತಂಕದ ಮಡುವಿಗೆ ತಳ್ಳಿರುವ ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಹಗರಣ ಇದೀಗ ಸುಪ್ರೀಂಕೋರ್ಟ್ ಮೆಟ್ಟಿ ಲೇರಿದೆ. ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ 12ನೇ ತರಗತಿಯ ಅರ್ಥಶಾಸ್ತ್ರ ವಿಷಯದ ಮರುಪರೀಕ್ಷೆಗೆ ನಿರ್ಧರಿಸಿರುವ ಸಿಬಿಎಸ್ಇ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಮಾ.26ರಂದು ನಡೆಸಲಾಗಿದ್ದ ಅರ್ಥಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಏ.25 ರಂದು ಮರುಪರೀಕ್ಷೆ ನಡೆಸುವುದಾಗಿ ಸಿಬಿಎಸ್ಇ ಪ್ರಕಟಿಸಿತ್ತು. ಆದರೆ ಆರೋಪದ ಕುರಿತು ಯಾವುದೇ ಸೂಕ್ತ ತನಿಖೆ ನಡೆಸದೆಯೇ, ಮರುಪರೀಕ್ಷೆಗೆ ನಿರ್ಧರಿಸುವ ಸಿಬಿಎಸ್ಇ ಕ್ರಮ ಸೂಕ್ತವಾಗಿಲ್ಲ. ಹೀಗಾಗಿ ಮರುಪರೀಕ್ಷೆಗೆ ತಡೆ ಕೋರಿ ದೆಹಲಿಯ ರೀಪಕ್ ಕನ್ಸಲ್ ಎಂಬುವವರು ಶನಿವಾರ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.