ಮೇ 29ರಂದು ಕೇರಳಕ್ಕೆ ಮುಂಗಾರು ಆಗಮನ: ಹವಾಮಾನ ಇಲಾಖೆ

Published : May 25, 2018, 09:48 AM ISTUpdated : May 25, 2018, 09:50 AM IST
ಮೇ 29ರಂದು ಕೇರಳಕ್ಕೆ ಮುಂಗಾರು ಆಗಮನ:  ಹವಾಮಾನ ಇಲಾಖೆ

ಸಾರಾಂಶ

ನೈಋುತ್ಯ ಮುಂಗಾರಿನ ಆಗಮನಕ್ಕೆ ಪರಿಸ್ಥಿತಿ ಅನುಕೂಲಕರವಾಗಿದ್ದು, ಇನ್ನೊಂದು ದಿನದಲ್ಲಿ ದಕ್ಷಿಣ ಅಂಡಮಾನ್‌ ಸಮುದ್ರವನ್ನು ಮುಂಗಾರು ಪ್ರವೇಶಿಸಲಿದೆ.

ನವದೆಹಲಿ: ನೈಋುತ್ಯ ಮುಂಗಾರಿನ ಆಗಮನಕ್ಕೆ ಪರಿಸ್ಥಿತಿ ಅನುಕೂಲಕರವಾಗಿದ್ದು, ಇನ್ನೊಂದು ದಿನದಲ್ಲಿ ದಕ್ಷಿಣ ಅಂಡಮಾನ್‌ ಸಮುದ್ರವನ್ನು ಮುಂಗಾರು ಪ್ರವೇಶಿಸಲಿದೆ.

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾಗಿದ್ದರಿಂದ ಮುಂಗಾರು ವಿಳಂಬವಾಗಬಹುದು ಎಂಬ ಆತಂಕ ದೂರವಾಗಿದೆ. ‘ಮೆಕುನು’ ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳಲಿದ್ದು, ವಾಯುವ್ಯ ದಿಕ್ಕಿನತ್ತ ಚಲಿಸುವ ಕಾರಣ ಅಂಡಮಾನ್‌ ಮತ್ತು ಲಕ್ಷದ್ವೀಪ ಸಮುದ್ರದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದಿಲ್ಲ. 

ಈ ಹಿಂದೆ ತಿಳಿಸಿದಂತೆ ಕೇರಳಕ್ಕೆ ಮೇ 29ರಂದು ಮುಂಗಾರು ಮಾರುತಗಳು ಆಗಮಿಸಲಿವೆ. ಈ ಬಾರಿ ದೇಶದಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ ಅವಧಿಯಲ್ಲಿ ಸಾಮಾನ್ಯ ಮುಂಗಾರಿನ ಶೇ.97ರಷ್ಟುಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ಎಸ್‌ಟಿಡಿ ಟೆಸ್ಟ್ ಮಾಡುವಂತೆ ಪದೇ ಪದೇ ಪೀಡಿಸುತ್ತಿದ್ದ ಗರ್ಲ್‌ಫ್ರೆಂಡ್‌ ಕತೆ ಮುಗಿಸಿದ ವಿದ್ಯಾರ್ಥಿ