ದಲಿತರ ಮೇಲೆ ದೌರ್ಜನ್ಯ: ರಾಜ್ಯಸಭೆಗೆ ಮಾಯಾವತಿ ರಾಜೀನಾಮೆ

Published : Jul 18, 2017, 06:14 PM ISTUpdated : Apr 11, 2018, 01:01 PM IST
ದಲಿತರ ಮೇಲೆ ದೌರ್ಜನ್ಯ: ರಾಜ್ಯಸಭೆಗೆ ಮಾಯಾವತಿ ರಾಜೀನಾಮೆ

ಸಾರಾಂಶ

ಉತ್ತರ ಪ್ರದೇಶದಲ್ಲಿ ದಲಿತರು, ಹಿಂದುಳಿದ ಹಾಗೂ ದುರ್ಬಲ ವರ್ಗದವರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಮಾತನಾಡಲು ನನಗೆ ಅವಕಾಶ ನೀಡಲಾಗುತ್ತಿಲ್ಲ. ಆಡಳಿತ ಪಕ್ಷ ಈ ರೀತಿ ನಡೆಸಿಕೊಳ್ಳುತ್ತಿರುವುದರಿಂದ ನಾನು ರಾಜ್ಯಸಭೆಗೆ ರಾಜೀನಾಮೆ ನೀಡಿದ್ದೇನೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

ನವದೆಹಲಿ: ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ರಾಜ್ಯಸಭಾ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿ ದಲಿತರು, ಹಿಂದುಳಿದ ಹಾಗೂ ದುರ್ಬಲ ವರ್ಗದವರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಮಾತನಾಡಲು ನನಗೆ ಅವಕಾಶ ನೀಡಲಾಗುತ್ತಿಲ್ಲ. ಆಡಳಿತ ಪಕ್ಷ ಈ ರೀತಿ ನಡೆಸಿಕೊಳ್ಳುತ್ತಿರುವುದರಿಂದ ನಾನು ರಾಜ್ಯಸಭೆಗೆ ರಾಜೀನಾಮೆ ನೀಡಿದ್ದೇನೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ರಾಜ್ಯಸಭೆಯಲ್ಲಿ ತನಗೆ ಮಾತನಾಡಲು ಅವಕಾಶ ನಿರಾಕರಿಸಲಾಗುತ್ತಿದೆ ಎಂದು ಆಕ್ರೊಶ ವ್ಯಕ್ತಪಡಿಸಿದ್ದ ಮಾಯಾವತಿ, ರಾಜೀನಾಮೆ ನೀಡುವುದಾಗಿ ಇಂದು ಬೆಳಗ್ಗೆ ಬೆದರಿಕೆ ಹಾಕಿದ್ದರು.

ಬೆಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದಲಿತರು ಹಾಗೂ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚಾಗಿದೆ ಎಂದು ಹೇಳಿದ ಮಾಯಾವತಿ, ಸಹರನ್’ಪುರದಲ್ಲಿ ನಡೆದ ಗಲಭೆಯನ್ನು ಯೋಗಿ ಆದಿತ್ಯನಾಥ್ ಸರ್ಕಾರ ಬಹಳ ಕೆಟ್ಟ ರೀತಿಯಲ್ಲಿ ನಿರ್ವಹಿಸಿದೆ ಎಂದು ಟೀಕಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ 2025-26 ವೇಳಾಪಟ್ಟಿ, ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ
ಬೈಕ್ ರೈಡಿಂಗ್‌ನಲ್ಲಿರುವ ಗಂಡನ ಮೇಲೆ ಆಕ್ರೋಶ ತೀರಿಸಿಕೊಂಡ ಹೆಂಡತಿ, ವಿಡಿಯೋ ವೈರಲ್