ಲೋಕಸಭಾ ಚುನಾವಣೆ ಬೆನ್ನಲ್ಲೇ 6 ನಾಯಕರು ವಜಾ

Published : Jun 03, 2019, 01:21 PM IST
ಲೋಕಸಭಾ ಚುನಾವಣೆ ಬೆನ್ನಲ್ಲೇ 6 ನಾಯಕರು ವಜಾ

ಸಾರಾಂಶ

ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಕಳಪೆ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಬಿಎಸ್ ಪಿ ನಾಯಕಿ ತಮ್ಮ ಪಕ್ಷದ 6 ನಾಯಕರಿಗೆ ಹುದ್ದೆಯಿಂದ ಗೇಟ್ ಪಾಸ್ ನೀಡಿದ್ದಾರೆ. ಯಾರು ನಾಯಕರು..? 

ಲಖನೌ: ಲೋಕಸಭಾ ಚುನಾವಣೆಯಲ್ಲಿನ ಬಿಎಸ್ಪಿಯ ಕಳಪೆ ಸಾಧನೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮಾಜಿ ಸಿಎಂ ಹಾಗೂ ಬಿಎಸ್ಪಿ ವರಿಷ್ಠೆ ಮಾಯಾವತಿ 6 ರಾಜ್ಯಗಳ ಉಸ್ತುವಾರಿ ಹಾಗೂ ಎರಡು ರಾಜ್ಯಗಳ ಪಕ್ಷದ ಅಧ್ಯಕ್ಷರನ್ನೇ ವಜಾಗೊಳಿಸಿದ್ದಾರೆ.

ಉತ್ತರಾಖಂಡ, ಬಿಹಾರ, ಜಾರ್ಖಂಡ್, ಒಡಿಶಾ, ಗುಜರಾತ್ ಮತ್ತು ರಾಜಸ್ಥಾನಗಳ ಉಸ್ತುವಾರಿಗಳನ್ನು ಬದಲಿಸಿದೆ.

ದೆಹಲಿ ರಾಜ್ಯಕ್ಕೆ ಲಕ್ಷ್ಮಣ ಸಿಂಗ್, ಮಧ್ಯಪ್ರದೇಶದಲ್ಲಿ ರಮಾಕಾಂತ್ ಪುಟ್ಟಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿದ್ದಾರೆ. 

ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟ ಭರ್ಜರಿ ಜಯಭೇರಿ ಭಾರಿಸಿ ಅಧಿಕಾರ ಚುಕ್ಕಾಣಿ ಹಿಡಿದಿದೆ.  ಕಳಪೆ ಸಾಧನೆಯಿಂದ ಕಂಗೆಟ್ಟ ಮಾಯಾ ನಾಯಕರಿಗೆ ಗೇಟ್ ಪಾಸ್ ನೀಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ