ಬಿಎಸ್ಪಿಯಿಂದ ಮಾಯಾವತಿ ಹೊರದಬ್ಬಲು ಪ್ರಯತ್ನ!

Published : Aug 08, 2017, 01:05 AM ISTUpdated : Apr 11, 2018, 12:53 PM IST
ಬಿಎಸ್ಪಿಯಿಂದ ಮಾಯಾವತಿ ಹೊರದಬ್ಬಲು ಪ್ರಯತ್ನ!

ಸಾರಾಂಶ

ಭಾನುವಾರ ದೆಹಲಿಯಲ್ಲಿ16 ದಲಿತ, ಮುಸ್ಲಿಂ ಹಾಗೂ ಇತರೆ ಹಿಂದುಳಿದ ವರ್ಗಗಳ ನಾಯಕರ ಸಭೆಯನ್ನು ನಡೆಸಿದ್ದಾರೆ.

ನವದೆಹಲಿ(ಆ.08): ಲೋಕಸಭೆ ಹಾಗೂ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಪರಾಭವಗೊಂಡಿರುವ ಹಿನ್ನೆಲೆಯಲ್ಲಿ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಪರದಾಡುತ್ತಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರನ್ನು ಆ ಪಕ್ಷದಿಂದಲೇ ಹೊರದಬ್ಬುವ ಪ್ರಯತ್ನವೊಂದು ಆರಂಭವಾಗಿದೆ.

ಕೆಲ ತಿಂಗಳವರೆಗೂ ಮಾಯಾವತಿ ಅವರ ಬಲಗೈ ಬಂಟನಂತಿದ್ದ ನಸೀಮುದ್ದೀನ್ ಸಿದ್ದಿಖಿ ಇದಕ್ಕೆ ಚಾಲನೆ ನೀಡಿದ್ದು, ಭಾನುವಾರ ದೆಹಲಿಯಲ್ಲಿ16 ದಲಿತ, ಮುಸ್ಲಿಂ ಹಾಗೂ ಇತರೆ ಹಿಂದುಳಿದ ವರ್ಗಗಳ ನಾಯಕರ ಸಭೆಯನ್ನು ನಡೆಸಿದ್ದಾರೆ. ಮಾಯಾವತಿ ವರ್ತನೆ ಹಾಗೂ ಸತತ ಸೋಲಿನ ಹಿನ್ನೆಲೆಯಲ್ಲಿ ಕೆಲವು ಶಾಸಕರು ಮಾಯಾವತಿ ಅವರನ್ನು ಕೆಳಗಿಳಿಸಬೇಕು ಎಂಬ ನಿಲುವು ಹೊಂದಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಉಚ್ಚಾಟಿತ ನಾಯಕ ಸಿದ್ದಿಖಿ ಅವರು ತಂತ್ರ ಹೆಣೆಯುತ್ತಿದ್ದಾರೆ. ಸಿದ್ದಿಖಿ ಅವರಿಗೆ ಬಿಜೆಪಿ ಬೆಂಬಲ ಕೂಡ ಇದೆ ಎಂದು ಹೇಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಕಿಂಗ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೆ ಹೊತ್ತಿ ಉರಿದ 40 ಎಕರೆ ಕಬ್ಬಿನ ಗದ್ದೆ!
ನಟ ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ, ದೈವದ ಕಟ್ಟುಕಟ್ಟಳೆಯಲ್ಲಿ ಲೋಪವಾಗಿಲ್ಲ: ವಾರಾಹಿ ದೈವಸ್ಥಾನ ಸಮಿತಿ ಸ್ಪಷ್ಟನೆ