ಸಿಎಂಗೆ ಪಂಚ್ ನೀಡಿದ್ದ ಮೇಯರ್ ಚಿನ್ನ ಗೆದ್ದರು!

Published : Nov 06, 2017, 10:37 AM ISTUpdated : Apr 11, 2018, 01:11 PM IST
ಸಿಎಂಗೆ ಪಂಚ್ ನೀಡಿದ್ದ ಮೇಯರ್ ಚಿನ್ನ ಗೆದ್ದರು!

ಸಾರಾಂಶ

ಇಬ್ಬರು ಮಕ್ಕಳ ತಾಯಿಯಾಗಿರುವ ಕವಿತಾ ಸನಿಲ್ ಅವರು ಹುಟ್ಟೂರಿನಲ್ಲಿ ನಡೆಯುತ್ತಿರುವ ಈ ಚಾಂಪಿಯನ್‌ಶಿಪ್‌ಗಾಗಿ ಸತತ ಎರಡು ತಿಂಗಳಿಂದ ಅಭ್ಯಾಸ ನಡೆಸಿದ್ದರು.

ಮಂಗಳೂರು(ನ.06): ನಗರದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಕರಾಟೆ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳಿಗೆ ಸಾಂಕೇತಿಕವಾಗಿ ಪಂಚ್ ನೀಡಿ ಸುದ್ದಿ ಯಾಗಿದ್ದ ಮೇಯರ್ ಕವಿತಾ ಸನಿಲ್ ಇದೀಗ ಅದೇ ಕೂಟದ ರಿಯಲ್ ಚಾಂಪಿಯನ್ ಆಗಿ ಮೂಡಿಬಂದಿದ್ದಾರೆ. 9 ವರ್ಷಗಳ ಬಳಿಕ ಕರಾಟೆ ಅಖಾಡಕ್ಕೆ ಇಳಿದ ಮೇಯರ್ ಕವಿತಾ ಅವರು 65 ಕೆ.ಜಿ.ಗಿಂತ ಮೇಲ್ಪಟ್ಟ ತೂಕದ ಬ್ಲ್ಯಾಕ್ ಬೆಲ್ಟ್ ವಿಭಾಗದ ಫೈನಲ್ ಪಂದ್ಯದಲ್ಲಿ ನಿಶಾ ನಾಯಕ್ ಅವರನ್ನು 7-3 ಅಂಕಗಳ ಅಂತರದಿಂದ ಸದೆಬಡಿದು ಚಿನ್ನದ ಪದಕವನ್ನು ಗೆದ್ದಿದ್ದಾರೆ.

1992ರಿಂದ 2008ರವರೆಗೆ ಸತತ ರಾಷ್ಟ್ರೀಯ ಚಾಂಪಿಯನ್ ಆಗಿದ್ದ ಅವರು ಮೂರು ಬಾರಿ ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಪದಕ ಪಡೆದಿದ್ದರು. ಇದೀಗ ಇಬ್ಬರು ಮಕ್ಕಳ ತಾಯಿಯಾಗಿರುವ ಕವಿತಾ ಸನಿಲ್ ಅವರು ಹುಟ್ಟೂರಿನಲ್ಲಿ ನಡೆಯುತ್ತಿರುವ ಈ ಚಾಂಪಿಯನ್‌ಶಿಪ್‌ಗಾಗಿ ಸತತ ಎರಡು ತಿಂಗಳಿಂದ ಅಭ್ಯಾಸ ನಡೆಸಿದ್ದರು. 2 ಮಕ್ಕಳ ತಾಯಿಯಾಗಿ 9 ವರ್ಷ ಬಳಿಕ ರಾಷ್ಟ್ರೀಯ ಚಾಂಪಿಯನ್‌ನಲ್ಲಿ ಚಿನ್ನ ಗೆದ್ದಿರುವುದು ಸಂತಸ ತಂದಿದೆ. ಸಾಕಷ್ಟು ಶ್ರಮಪಟ್ಟಿದ್ದೇನೆ. ನನ್ನ ಕರಾಟೆ ಶಿಕ್ಷಕರ ಸತತ ತರಬೇತಿಯಿಂದ ಸಾಧ್ಯವಾಗಿದೆ ಎಂದು'  ಕವಿತಾ ಸನಿಲ್ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ
ದ್ವೇಷ ಭಾಷಣ ಶಾಸನ ಕಾಂಗ್ರೆಸ್ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಪ್ರಲ್ಹಾದ್ ಜೋಶಿ ಕಿಡಿ