
ಬೆಂಗಳೂರು(ಆ. 14): ಎಂವಿಜೆ ಲೇಔಟ್ ಪಾರ್ಕ್'ನಲ್ಲಿ ರಾಡ್ ಬಿದ್ದು ಮೃತಪಟ್ಟಿದ್ದ ಬಾಲಕಿ ಪ್ರಿಯಾ ಮನೆಗೆ ಅಧಿಕಾರಿಗಳೊಂದಿಗೆ ಮೇಯರ್ ಪದ್ಮಾವತಿ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು. ಜತೆಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದರು. ಇದೇ ವೇಳೆ, ಪ್ರಿಯಾ ಪೋಷಕರು ಮೇಯರ್ ಅವರನ್ನು ತರಾಟೆ ತೆಗೆದುಕೊಂಡರು. ನನ್ನ ಮಗಳ ಪ್ರಾಣಕ್ಕೆ ಬೆಲೆ ಕಟ್ಟಿದರೆ ಕ್ಷಮಿಸಲಾರೆ. ಮೂರು ದಿನಗಳಾದರೂ ನೀವು ಯಾವುದೇ ಕ್ರಮ ಜರುಗಿಸಿಲ್ಲ. ನನಗಾದ ಅನ್ಯಾಯ ಮತ್ಯಾರಿಗೂ ಆಗದಂತೆ ಬಿಬಿಎಂಪಿ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಪ್ರಿಯಾ ತಂದೆ ಸುಬ್ರಮಣಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ, ಪಾರ್ಕ್'ನ ನಿರ್ವಹಣೆ ಹೊಂದಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸಬೇಕೆಂದು ಮೇಯರ್ ಪದ್ಮಾವತಿ ಸೂಚನೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.