
ಬೆಂಗಳೂರು (ಜ.16): ಗೋವಾ ಸಚಿವ ವಿನೋದ್ ಪಾಳೇಕರ್ ಮಹದಾಯಿ ವಿಚಾರವಾಗಿ ಮತ್ತೆ ಉದ್ಧಟತನ ಮೆರೆದಿದ್ದಾರೆ. ಕನ್ನಡಿಗರಿಗೆ ಮಹದಾಯಿ ನೀರು ಕೊಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಅಲ್ಲದೇ ಮಹದಾಯಿ ನೀರಿನ ಉಳಿವಿಗಾಗಿ ನಾವು ಯಾವುದೇ ಹಂತಕ್ಕೂ ಹೋಗಲು ಸಿದ್ಧವಿದ್ದೇವೆ ಎಂದು ಹೇಳಿದ್ದಾರೆ. ಕರ್ನಾಟಕ ನ್ಯಾಯಾಂಗ ನಿಂದನೆ ಮಾಡಿದೆ. ಆದ್ದರಿಂದ ಕರ್ನಾಟಕದ ವಿರುದ್ಧ ಕೇಸ್ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.
ಇದೀಗ ವಿನೋದ್ ಪಾಳೇಕರ್ ಅವರ ಉದ್ಧಟತನದ ಹೇಳಿಕೆಗೆ ಎಂ.ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ. ನಮ್ಮ ನಾಡ ರಕ್ಷಣೆ ಪಾಠವನ್ನು ನಿಮ್ಮಿಂದ ಕಲಿಯಬೇಕಾಗಿಲ್ಲ. ನಿಮ್ಮಂತ ಸಾವಿರ ಜನ ಬಂದರೂ ಕೂಡ ನಮ್ಮನ್ನು ಬಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಟ್ವಿಟರ್’ನಲ್ಲಿ ಪಾಳೇಕರ್ ವಿರುದ್ಧ ಪಾಟೀಲ್ ಈ ಹೇಳಿಕೆ ನೀಡಿದ್ದಾರೆ. ಅಲ್ಲದೇ ಮಹದಾಯಿ ನಮ್ಮ ಹಕ್ಕಾಗಿದೆ. ಇದು ನಿಮ್ಮ ಭಿಕ್ಷೆ ಅಲ್ಲ ಎಂದು ಅವರು ಹೇಳಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.