ಪ್ರತ್ಯೇಕ ಧರ್ಮ : ಕಿಡಿ ಹಚ್ಚಿಸಿದ ಎಂ.ಬಿ ಪಾಟೀಲ್ ಹೊಸ ಬಾಂಬ್

Published : Aug 01, 2017, 12:01 AM ISTUpdated : Apr 11, 2018, 12:47 PM IST
ಪ್ರತ್ಯೇಕ ಧರ್ಮ : ಕಿಡಿ ಹಚ್ಚಿಸಿದ ಎಂ.ಬಿ ಪಾಟೀಲ್ ಹೊಸ ಬಾಂಬ್

ಸಾರಾಂಶ

ವೀರಶೈವ ಲಿಂಗಾಯತ ಸ್ವತಂತ್ರ ಧರ್ಮ, ರಾಷ್ಟ್ರೀಯ ಅಲ್ಪಸಂಖ್ಯಾತರ ಸ್ಥಾನ ಮಾನ ಮತ್ತು ಜನಗಣತಿಯಲ್ಲಿ ಪ್ರತ್ಯೇಕ ಕೋಡ್‌/ಕಾಲಂ ನೀಡುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಕೇಂದ್ರ ಗೃಹ ಸಚಿವರಿಗೆ ಸಲ್ಲಿಸಿದ್ದ ಪತ್ರಕ್ಕೆ ನಾನು ಹಾಗೂ ನನ್ನಂತೆ ಹಲವಾರು ಜನಪ್ರತಿನಿಧಿಗಳು ಸಹಿ ಮಾಡಿದ್ದಾರೆ. 

ಬೆಂಗಳೂರು(ಆ.01): ಪ್ರತ್ಯೇಕ ಧರ್ಮ ವಿಚಾರದಲ್ಲಿ ಸಚಿವ ಎಂ.ಬಿ ಪಾಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ವೀರಶೈವ- ಲಿಂಗಾಯತ ಒಗ್ಗೂಡಿ ಸ್ವತಂತ್ರ ಧರ್ಮವಾಗಬೇಕೆಂಬ ಮನವಿಗೆ ಸಹಿ ಹಾಕಿ ತಪ್ಪು ಮಾಡಿದ್ದೇನೆ. ಕೇವಲ ಲಿಂಗಾಯತ ಧರ್ಮ ಮಾತ್ರವೇ ಸ್ವತಂತ್ರ ಧರ್ಮವಾಗಬೇಕೆಂದು ಪತ್ರ ಬರೆದಿದ್ದಾರೆ. ಈ ಮೂಲಕ ವೀರಶೈವ ಮತ್ತು ಲಿಂಗಾಯತ ನಡುವೆ  ಮತ್ತಷ್ಟು ಕಿಡಿ ಹಚ್ಚಿಸಿದ್ದಾರೆ.

‘ಲಿಂಗಾಯತ ಪ್ರತ್ಯೇಕ ಧರ್ಮ ಬೇಕು’

ವೀರಶೈವ ಲಿಂಗಾಯತ ಸ್ವತಂತ್ರ ಧರ್ಮ, ರಾಷ್ಟ್ರೀಯ ಅಲ್ಪಸಂಖ್ಯಾತರ ಸ್ಥಾನ ಮಾನ ಮತ್ತು ಜನಗಣತಿಯಲ್ಲಿ ಪ್ರತ್ಯೇಕ ಕೋಡ್‌/ಕಾಲಂ ನೀಡುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಕೇಂದ್ರ ಗೃಹ ಸಚಿವರಿಗೆ ಸಲ್ಲಿಸಿದ್ದ ಪತ್ರಕ್ಕೆ ನಾನು ಹಾಗೂ ನನ್ನಂತೆ ಹಲವಾರು ಜನಪ್ರತಿನಿಧಿಗಳು ಸಹಿ ಮಾಡಿದ್ದಾರೆ.  ಆದರೆ ನನಗೀಗ ಸಹಿ ಮಾಡಿರುವುದು ತಪ್ಪು ಎಂದು ಮನವರಿಕೆಯಾಗಿದೆ.  ವೀರಶೈವ ಮಹಾಸಭೆಯವರು ಹಿಂದಿನ ಪ್ರಮಾದಗಳನ್ನು ಸರಿಪಡಿಸಿ, ವೀರಶೈವ ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮ ಎಂದು ಮಾನ್ಯತೆ ಸಿಗುವುದಿಲ್ಲ ಎಂಬ ಕಟು ಸತ್ಯವನ್ನು ಅರಿತುಕೊಂಡು ಇನ್ನು ಮುಂದಾದರೂ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಅಥವಾ ವಿವಿಧ ವೇದಿಕೆಗಳಿಗೆ ಲಿಂಗಾಯತ ಸ್ವತಂತ್ರ ಧರ್ಮ ಎಂದು ಪರಿಗಣಿಸಲು ಒತ್ತಾಸೆಯನ್ನು ಮಾಡಬೇಕು.

ಲಿಂಗಾಯತ ಮಾತ್ರವೇ ಪ್ರತ್ಯೇಕ ಧರ್ಮವಾಗಬೇಕೆಂದಿರುವ ಪಾಟೀಲರು, ಇದಕ್ಕಾಗಿ ಪಂಚಪೀಠಾಧೀಶ್ವರರು, ಮಠಾಧೀಶರು ಹಾಗೂ ವೀರಶೈವ ಹಾಗೂ ಲಿಂಗಾಯತರ ವಿಶ್ವಾಸಕ್ಕೆ ತೆಗೆದುಕೊಂಡೇ ತೀರ್ಮಾನಿಸಬೇಕೆಂದು ಶಾಮನೂರು ಶಿವಶಂಕರಪ್ಪಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಆದ್ರೆ ಎಂ.ಬಿ ಪಾಟೀಲ್ ಅವ್ರಿಂದ ನನಗೆ ಯಾವುದೇ ಪತ್ರ ಬಂದಿಲ್ಲ ಅಂತಾ  ಶಾಮನೂರು ಶಿವಶಂಕರಪ್ಪ ಸ್ಪಷ್ಟಪಡಿಸಿದ್ದಾರೆ. ಪಾಟೀಲರ ಪತ್ರಕ್ಕೆ ಬಿಜೆಪಿ ನಾಯಕರು ದಿವ್ಯಮೌನಕ್ಕೆ ಶರಣಾಗಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಯಾವುದೇ ಹೇಳಿಕೆ ನೀಡದಂತೆ  ರಾಜ್ಯ ಬಿಜೆಪಿ, ಪಕ್ಷದ ನಾಯಕರಿಗೆ ಸೂಚಿಸಿದೆ. ಈ ಮೂಲಕ ಸೂಕ್ತ ಸಮಯದಲ್ಲಿ ಪ್ರತ್ಯೇಕ ಧರ್ಮದ ಏಟಿಗೆ ತಿರುಗೇಟು ನೀಡಲು ಮುಂದಾಗಿದೆ.

ಇನ್ನೂ ಮಾತೆ ಮಹಾದೇವಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ರಂಭಾಪುರಿ ಶ್ರೀಗಳ ವಿರುದ್ಧ  ಮಹಿಳಾ ಆಯೋಗಕ್ಕೆ  ದೂರು ನೀಡಲಾಗಿದೆ. ಬಿ.ಎಸ್ ಗೌಡ ಎಂಬುವರು, ರಂಭಾಪುರಿ ಶ್ರೀಗಳ ವಿರುದ್ಧ ಕ್ರಮಕೈಗೊಳ್ಳುವಂತೆ ದೂರು ನೀಡಿದ್ದಾರೆ.

ವರದಿ: ವೀರೇಂದ್ರ ಉಪ್ಪುಂದ, ಸುವರ್ಣನ್ಯೂಸ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾಳೆ ಬೆಂಗಳೂರಿನ ಹಲೆವೆಡೆ ಪವರ್ ಕಟ್, ಸಾರ್ವಜನಿಕರಿಗೆ ಮಹತ್ವದ ಸೂಚನೆ
ಅನೇಕಲ್‌ನಲ್ಲಿ ಭೀಕರ ಅಪಘಾತ; 20 ವಾಹನಕ್ಕೆ ಕಂಟೈನರ್ ಡಿಕ್ಕಿ, 2ಕ್ಕೂ ಹೆಚ್ಚು ಸಾವು, ಹಲವರು ಗಂಭೀರ