ವೈಯಾಲಿಕಾವಲ್‌ ಡ್ರಗ್ಸ್ ಪ್ರಕರಣ , ಮೆಡಿಕಲ್ ಶಾಪ್ ಮಾಲೀಕನ ಬಂಧನ

Published : Nov 23, 2019, 01:04 PM ISTUpdated : Nov 23, 2019, 01:09 PM IST
ವೈಯಾಲಿಕಾವಲ್‌ ಡ್ರಗ್ಸ್ ಪ್ರಕರಣ , ಮೆಡಿಕಲ್ ಶಾಪ್ ಮಾಲೀಕನ ಬಂಧನ

ಸಾರಾಂಶ

ವೈಯಾಲಿಕಾವಲ್‌ನ ಕೋದಂಡರಾಮಪುರದಲ್ಲಿ ಯುಕರಿಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಮೆಡಿಕಲ್ ಶಾಪ್ ಮಾಲೀಕ ಮನೀಶ್ ಕುಮಾರ್ ಎಂಬಾತನನ್ನು ಬಂಧಿಸಲಾಗಿದೆ. ಅನಧಿಕೃತವಾಗಿ ಔಷಧ ಮಾರಾಟ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ.

ಬೆಂಗಳೂರು(ನ.23): ವೈಯಾಲಿಕಾವಲ್‌ನ ಕೋದಂಡರಾಮಪುರದಲ್ಲಿ ಯುಕರಿಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಮೆಡಿಕಲ್ ಶಾಪ್ ಮಾಲೀಕ ಮನೀಶ್ ಕುಮಾರ್ ಎಂಬಾತನನ್ನು ಬಂಧಿಸಲಾಗಿದೆ. ಅನಧಿಕೃತವಾಗಿ ಔಷಧ ಮಾರಾಟ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ.

ಟೈಡಾಲ್ ಟ್ಯಾಬ್ಲೆಟ್ ಡ್ರಗ್ಸ್ ಮಾದರಿ ಬಳಸಿ ಇಬ್ಬರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಔಷಧ ನೀಡಿದ್ದ ಮೆಡಿಕಲ್ ಶಾಪ್ ಮಾಲೀಕ ಮನೀಶ್ ಕುಮಾರ್‌ನ್ನು ಪೊಲೀಸರು ಬಂಧಿಸಿದ್ದಾರೆ.

ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಶಂಕೆ: ಯುವಕರಿಬ್ಬರ ಶಂಕಾಸ್ಪದ ಸಾವು!

ಅನಧಿಕೃತವಾಗಿ ಔಷಧ ಮಾರಾಟ ಮಾಡಿದ ಹಿನ್ನಲೆ ಆರೋಪಿ ಬಂಧನ ಮಾಡಲಾಗಿದ್ದು, ನವಂಬರ್  20 ರಂದು ವೈಯಾಲಿಕಾವಲ್ ಅಭಿಷೇಕ್ ಮತ್ತು ಗೋಪಿ ಎಂಬವರು ಮೃತಪಟ್ಟಿದ್ದರು. ರಾಜಾಜಿನಗರದ ಮನ್ ದೀಪ್ ಫಾರ್ಮ್ ಗೆ ನಲ್ಲಿ ಟೈಡಾಲ್ ಟ್ಯಾಬ್ಲೆಟ್, ಸಿರಿಂಜ್, ಡಿಸ್ಟಿಲ್ ವಾಟರ್ ಖರೀದಿ

ಮೃತ ಗೋಪಿ ನವೆಂಬರ್ 17 ರಂದು ಮೆಡಿಕಲ್ ಶಾಪ್ ಗೆ ತೆರಳಿ ಔಷಧ ಖರೀದಿಸಿ ತಂದಿದ್ದ. ಬಳಿಕ ವೈಯಾಲಿಕಾವಲ್‌ನ ಅಭಿಷೇಕ್ ಮನೆಯಲ್ಲಿ ಮೂವರು ಮೆಡಿಕಲ್‌ನಿಂದ ಖರೀದಿಸಿದ ಔಷಧ ಸೇವಿಸಿದ್ದರು. ಡಿಸ್ಟಿಲ್ ವಾಟರ್‌ನಲ್ಲಿ ಕ್ರಶ್ ಮಾಡಿ ಸಿರಿಂಜ್ ಮೂಲಕ ಇಂಜೆಕ್ಟ್ ಮಾಡಿಕೊಂಡಿದ್ದರು. ಹೆಚ್ಚಿನ ಡೋಸೆಜ್ ಶರೀರಕ್ಕೆ ಸೇರಿದ ಹಿನ್ನಲೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅಭಿಷೇಕ್ ಮತ್ತು ಗೋಪಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದರು.

ಗಂಡನ ಮನೆಯವರ ಕಿರುಕುಳ: ಗರ್ಭಿಣಿ ಆತ್ಮಹತ್ಯೆ

ಇದೇ ಮಾದರಿಯಲ್ಲಿ ಸುಹಾಸ್ ಚಿಟ್ಟೆಗೂ ಔಷಧ ಇಂಜೆಕ್ಟ್ ಮಾಡಿದ್ದು, ಸದ್ಯ ಸುಹಾಸ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಸುಹಾಸ್ ಚಿಟ್ಟೆ ಹೇಳಿಕೆ ಮೇರೆಗೆ ಮೆಡಿಕಲ್ ಶಾಪ್ ಮಾಲೀಕ ಮನೀಶ್ ಕುಮಾರ್‌ನ್ನು ಪೊಲೀಸರು ಬಂಧಿಸಿದ್ದಾರೆ. ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಸ್ಕಿ ಹೊಡೆದು, ಶಿರಬಾಗಿ ನಮಿಸಿ ದೇವರ ಕಿರೀಟ ಕದ್ದ!, ವಿಡಿಯೋ ವೈರಲ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿ ಗಲಭೆ: ಶ್ರೀರಾಮುಲು, ಜನಾರ್ದನ ರೆಡ್ಡಿ ಸೇರಿ 10ಕ್ಕೂ ಹೆಚ್ಚು ಜನರ ವಿರುದ್ಧ FIR
ಗಾಲಿ ರೆಡ್ಡಿ ವಿರುದ್ಧ FIR ಆಗುವವರೆಗೂ ಸ್ಥಳ ಬಿಟ್ಟು ಹೋಗಲ್ಲ ಎಂದ ಭರತ್ ರೆಡ್ಡಿ: ಒಂದೇ ಸಮಯಕ್ಕೆ ಇಬ್ಬರು ನಾಯಕರ ಸುದ್ದಿಗೋಷ್ಠಿ