
ಬೆಂಗಳೂರು : ಆನ್ಲೈನ್ ಮೂಲಕ ಔಷಧಗಳ ಖರೀದಿ ಹಾಗೂ ಮಾರಾಟಕ್ಕೆ (ಇ-ಫಾರ್ಮಸಿ) ಅವಕಾಶ ನೀಡುವುದನ್ನು ವಿರೋಧಿಸಿ ಆಲ್ ಇಂಡಿಯಾ ಆರ್ಗನೈಸೇಷನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ ಸೆ. 28 ರಂದು ದೇಶಾದ್ಯಂತ ಔಷಧ ಮಳಿಗೆಗಳ ಮುಷ್ಕರಕ್ಕೆ ಕರೆ ನೀಡಿದೆ.
ಈ ಹಿನ್ನೆಲೆಯಲ್ಲಿ ಸೆ.28 ರಂದು ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್ಗಳನ್ನು ಬಂದ್ ಮಾಡಿ ಮುಷ್ಕರ ನಡೆಸಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಆರ್. ರಘುನಾಥರೆಡ್ಡಿ ತಿಳಿಸಿದ್ದಾರೆ.
ಔಷಧಗಳು ಜನರ ಆರೋಗ್ಯ ಕಾಪಾಡಲು ಇರುವುದೇ ಹೊರತು ಕೆಡಿಸಲು ಅಲ್ಲ. ಔಷಧ ವಿತರಣೆ ಹಾಗೂ ಸಂಗ್ರಹದಲ್ಲಿ ಅದರದ್ದೇ ಆದ ಕ್ರಮಗಳನ್ನು ಅನುಸರಿಸಬೇಕು. ಹೀಗಿರುವಾಗ ಪರವಾನಗಿ ಇಲ್ಲದೆಯೇ ಮನಸೋ ಇಚ್ಚೆ ರಿಯಾಯಿತಿ ನೀಡುವ ಮೂಲಕ ಆನ್ಲೈನ್ನಲ್ಲಿ ಔಷಧ ವಿತರಿಸಲಾಗುತ್ತಿದೆ.
ಮುಷ್ಕರದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 6,500, ಕರ್ನಾಟಕದಲ್ಲಿ 24 ಸಾವಿರ ಸೇರಿದಂತೆ ದೇಶಾದ್ಯಂತ 6.5 ಲಕ್ಷ ಔಷಧ ಮಳಿಗೆಗಳನ್ನು ಸೆ.28 ರಂದು ಮುಚ್ಚಲಾಗುವುದು. ಆ ಮೂಲಕ ಆನ್ಲೈನ್ ಔಷಧ ಮಾರಾಟ ತಡೆಯುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಲಾಗುವುದು ಎಂದು ಮಾಹಿತಿ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.