
ಬೆಂಗಳೂರು[ನ.12] ಜನರಿಗೆ ಅಗ್ಗದ ದರದಲ್ಲಿ ಔಷಧಿ ದೊರೆಯಲು ಸ್ಥಾಪಿಸಲಾಗಿರುವ ಜನೌಷಧಿ ಕೇಂದ್ರಗಳ ಹಿಂದೆ ಅನಂತ ಕುಮಾರ್ ಪರಿಶ್ರಮವಿದೆ. ಕೇಂದ್ರ ವಿಮಾನಯಾನ, ಪ್ರವಾಸೋದ್ಯಮ, ಸಂಸ್ಕೃತಿ, ಯುವಜನಸೇವಾ, ಪ್ರವಾಸೋದ್ಯಮ, ನಗರಾಭಿವೃದ್ಧಿ, ಬಡತನ ನಿರ್ಮೂಲನೆ, ಗ್ರಾಮೀಣಾಭಿವೃದ್ಧಿ, ರಸಗೊಬ್ಬರ ಮತ್ತು ಔಷಧ, ಸಂಸದೀಯ ವ್ಯವಹಾರ ಸಚಿವ ಸ್ಥಾನದ ಜವಾಬ್ದಾರಿ ನಿರ್ವಹಿಸಿದ ಅನಂತ್ ಕುಮಾರ್ ನಮ್ಮನ್ನು ಅಗಲಿದ್ದಾರೆ.
ಅನಂತ್ ಕುಮಾರ್ ಬಗ್ಗೆ ಗೊತ್ತಿಲ್ಲದ ಸಂಗತಿಗಳಿವು
ಔಷಧ ಮಾಫಿಯಾಕ್ಕೆ ಬಗ್ಗದ ಕುಮಾರ: ಸಿಕ್ಕ ಖಾತೆಯಲ್ಲೇ ಕ್ರಾಂತಿಕಾರಕ ಬದಲಾವಣೆ ತಂದಿದ್ದು ಅನಂತ್ ಹಿರಿಮೆ. 10 ಪೈಸೆಯ ಮಾತ್ರೆಯನ್ನು 100 ರೂ.ಗೆ ಮಾರುತ್ತಿದ್ದ ಅತಿದೊಡ್ಡ ಔಷಧ ಮಾಫಿಯಾವನ್ನೇ ಅನಂತ್ ಎದುರು ಹಾಕಿಕೊಂಡಿದ್ದರು.
ಹೃದಯದ ಸ್ಟಂಟ್ ಹಾಗೂ ಮೊಣಕಾಲು ಅಸ್ಥಿಮಜ್ಜೆ ಮರುಜೋಡಣೆ ವೆಚ್ಚವನ್ನು ಶೇ.85ರಷ್ಟು ಇಳಿಕೆ ಮಾಡಿದ್ದು ಇನ್ನೊಂದು ಸಾಧನೆ. ದೇಶಾದ್ಯಂತ 3600 ಜನೌಷಧಿ ಕೇಂದ್ರ ಸ್ಥಾಪಿಸಿ ಕಡಿಮೆ ದರದಲ್ಲಿ ಬಡವರಿಗೆ ಔಷಧ ಲಭ್ಯವಾಗುವಂತೆ ಮಾಡಿದ್ದು, ‘ಸುವಿಧಾ ’ ಜೈವಿಕ ಸ್ಯಾನಿಟರಿ ಪ್ಯಾಡ್ ಪೂರೈಕೆ ಆರಂಭಿಸಿದರು. ಆಧಿನಿಕ ಜಗತ್ತಿನಲ್ಲಿ ಕಾಡುವ ಹೃದ್ರೋಗಕ್ಕೆ ಅಗತ್ಯವಾಗಿ ಬೇಕಾಗುವ ಸ್ಟಂಟ್ ಗಳ ದರವನ್ನು ಶೇ. 80 ರಷ್ಟು ಇಳಿಕೆ ಮಾಡಿ ಬಡವರಿಗೂ ಹೃದಯ ಚಿಕಿತ್ಸೆ ಭಾಗ್ಯ ನೀಡಿದ್ದು ಅನಂತ್ ಕುಮಾರ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.