ಮುಫ್ತಿ ಸಂಪುಟಕ್ಕೆ ಕಳಂಕಿತ ಬಿಜೆಪಿ ಸಚಿವ

Published : May 01, 2018, 10:09 AM IST
ಮುಫ್ತಿ ಸಂಪುಟಕ್ಕೆ ಕಳಂಕಿತ ಬಿಜೆಪಿ ಸಚಿವ

ಸಾರಾಂಶ

ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ- ಬಿಜೆಪಿ ಮೈತ್ರಿ ಸರ್ಕಾರವನ್ನು ಮುನ್ನಡೆಸುತ್ತಿರುವ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಸೋಮವಾರ ತಮ್ಮ ಸಚಿವ ಸಂಪುಟವನ್ನು ಪುನಾರಚನೆ ಮಾಡಿದ್ದಾರೆ. ಈ ವೇಳೆ ಬಿಜೆಪಿಯ 8 ಜನ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಪೈಕಿ ಹಾಲಿ ಸ್ಪೀಕರ್  ಹುದ್ದೆಯಲ್ಲಿದ್ದ ಕವಿಂದರ್ ಗುಪ್ತಾ ಅವರನ್ನು ನೂತನ ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. 

ಜಮ್ಮು-ಕಾಶ್ಮೀರ (ಮೇ. 01): ಪಿಡಿಪಿ- ಬಿಜೆಪಿ ಮೈತ್ರಿ ಸರ್ಕಾರವನ್ನು ಮುನ್ನಡೆಸುತ್ತಿರುವ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಸೋಮವಾರ ತಮ್ಮ ಸಚಿವ ಸಂಪುಟವನ್ನು ಪುನಾರಚನೆ ಮಾಡಿದ್ದಾರೆ. ಈ ವೇಳೆ ಬಿಜೆಪಿಯ 8 ಜನ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಈ ಪೈಕಿ ಹಾಲಿ ಸ್ಪೀಕರ್  ಹುದ್ದೆಯಲ್ಲಿದ್ದ ಕವಿಂದರ್ ಗುಪ್ತಾ ಅವರನ್ನು ನೂತನ ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.

ಜಮ್ಮು-ಕಾಶ್ಮೀರದ ಬಿಜೆಪಿ ಘಟಕದ ಅಧ್ಯಕ್ಷ ಸತ್ಪಾಲ್ ಶರ್ಮಾ ಸಚಿವ ಹುದ್ದೆ ಪಡೆದ ಪ್ರಮುಖರು ಈ ಹಿಂದೆ ಡಿಸಿಎಂ ಆಗಿದ್ದ ಬಿಜೆಪಿಯ ನಿರ್ಮಲ್ ಸಿಂಗ್, ಆರೋಗ್ಯ ಸಚಿವ ಬಾಲಿ ಭಗತ್ ಮತ್ತು ಪ್ರವಾಸೋದ್ಯಮ ಸಚಿವರಾಗಿದ್ದ ಪ್ರಿಯಾ ಸೇಠಿ ಅವರಿಗೆ ಮುಫ್ತಿ ಸಂಪುಟದಿಂದ ಕೊಕ್ ನೀಡಲಾಗಿದೆ. ನಿರ್ಮಲ್‌ಸಿಂಗ್‌ಗೆ ಸ್ಪೀಕರ್ ಹುದ್ದೆ ನೀಡಲಾಗಿದೆ.  ಕಠುವಾ ಅತ್ಯಾಚಾರ ಮತ್ತು ಹತ್ಯೆ  ಪ್ರಕರಣದ ಆರೋಪಿಗಳ ಪರವಾಗಿ ಬಿಜೆಪಿ ಸಚಿವರಾದ ಲಾಲ್ ಸಿಂಗ್ ಮತ್ತು ಚಂದರ್ ಪ್ರಕಾರ್ ಗಂಗಾ ಅವರು ಪ್ರತಿಭಟನೆ ಕೈಗೊಂಡಿದ್ದರು.

ಇದರಿಂದ ವ್ಯಾಪಕ ಟೀಕೆಗೆ ಗುರಿಯಾಗಿ, ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಂಪುಟ ಪುನಾರಚನೆಗೆ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ನಿರ್ಧರಿಸಿದ್ದರು. ಆದರೆ ಇದೇ ರ್ಯಾಲಿಯಲ್ಲಿ ಭಾಗಿಯಾಗಿದ್ದ ಕಠುವಾ ಕ್ಷೇತ್ರದ ಬಿಜೆಪಿ ಶಾಸಕ ರಾಜೀವ್ ಜಸ್ರೋತಿಯಾ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಇದು ಮತ್ತೆ ವಿವಾದಕ್ಕೆ ಕಾರಣವಾಗುವ ಸಾಧ್ಯತೆ ಇದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಎಐ ನಿರ್ಮಾತೃಗಳಿಗೆ 2025ರ ಟೈಮ್ ವರ್ಷದ ವ್ಯಕ್ತಿ ಗೌರವ!