‘ಮಿಸ್ಟರ್ ಪಿಎಂ ನಿಮ್ಮ ತಾಯಿ ಮೀಟ್ ಆದ್ರಿ: ನನ್ನನ್ನೇಕೆ ದೂರ ಇಟ್ರಿ?’

Published : Sep 21, 2019, 02:56 PM ISTUpdated : Sep 21, 2019, 03:13 PM IST
‘ಮಿಸ್ಟರ್ ಪಿಎಂ ನಿಮ್ಮ ತಾಯಿ ಮೀಟ್ ಆದ್ರಿ: ನನ್ನನ್ನೇಕೆ ದೂರ ಇಟ್ರಿ?’

ಸಾರಾಂಶ

‘ಪ್ರಧಾನಿ ಮೋದಿ ಅವ್ರೇ ನಿಮ್ಮ ತಾಯಿ ಭೇಟಿಯಾದ್ರಂತೆ ಹೌದಾ?’| ‘ನನಗೇಕೆ ನನ್ನ ತಾಯಿ ಭೇಟಿಗೆ ಅವಕಾಶವಿಲ್ಲ’? ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಪುತ್ರಿ ಇಲ್ತಿಜಾ ಮುಫ್ತಿ ಪ್ರಶ್ನೆ| ತಾಯಿಯ ಭೇಟಿಗೆ ಅವಕಾಶ ನೀಡದಿರುವುದು ಅಮಾನವೀಯತೆ ಎಂದ ಇಲ್ತಿಜಾ| ‘ಕಾಶ್ಮೀರಿಗರು ಆಘಾತ ಮತ್ತು ದ್ರೋಹದ ಆಳವಾದ ನೋವನ್ನು ಅನುಭವಿಸುತ್ತಿದ್ದಾರೆ’| 

ಶ್ರೀನಗರ(ಸೆ.21): ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ ಕಣಿವೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ ಮುಂಜಾಗೃತಾ ಕ್ರಮವಾಗಿ ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿರಿಸಲಾಗಿದೆ.

ಗೃಹ ಬಂಧನದಲ್ಲಿರುವ ರಾಜಕೀಯ ನಾಯಕರನ್ನು ಕುಟುಂಬಸ್ಥರು ಭೇಟಿಯಾಗುವುದು ದುಸ್ತರವಾಗಿದ್ದು, ಅತ್ಯಂತ ಕಠಿಣ ನಿಲುವುಗಳ ಬಳಿಕವಷ್ಟೇ ಭೇಟಿಗೆ ಅವಕಾಶ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರದ ಈ ನಿಲುವನ್ನು ಖಂಡಿಸಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಪುತ್ರಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

ಮೋದಿ ತಮ್ಮ ಹುಟ್ಟುಹಬ್ಬದ ದಿನದಂದು ತಮ್ಮ ತಾಯಿಯನ್ನು ಭೇಟಿಯಾಗಿದ್ದು ಸಂತೋಷ, ಆದರೆ ನನಗೆ ಆ ಅವಕಾಶ ಇಲ್ಲದಿರುವುದು ಅಮಾನವೀಯತೆಯ ಪ್ರದರ್ಶನ ಅಲ್ಲವೇ ಎಂದು ಇಲ್ತಿಜಾ ಪ್ರಶ್ನಿಸಿದ್ದಾರೆ. 

ಚಂದ್ರಯಾನ 2 ವಿಫಲವಾದಾಗ ಇಡೀ ಭಾರತವೇ ಶೋಕಿಸಿತ್ತು. ಆದರೆ ಕಾಶ್ಮೀರದ ಈ ದುಃಸ್ಥಿತಿಗೆ ಮರುಗುವವರೇ ಇಲ್ಲ. ಕಾಶ್ಮೀರಿಗರು ಆಘಾತ ಮತ್ತು ದ್ರೋಹದ ಆಳವಾದ ನೋವನ್ನು ಅನುಭವಿಸುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಇಲ್ತಿಜಾ ಹರಿಹಾಯ್ದಿದ್ದಾರೆ.

ಇದೇ ವೇಳೆ ಕಾಶ್ಮೀರದ ಸ್ಥಿತಿಗತಿ ಕುರಿತು ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರ ಹಾಗೂ ಜಮ್ಮು ಮತ್ತು ಕಾಶ್ಮೀರದ ಗೃಹ ಇಲಾಖೆ ಕಾರ್ಯದರ್ಶಿಗಳಿಗೆ ಇಲ್ತಿಜಾ ಮುಳ್ತಿ ಪತ್ರ ಬರೆದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್
ಗ್ಯಾಸ್ ಸಿಲಿಂಡರ್ ಸ್ಫೋಟ: ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು