
ಶ್ರೀನಗರ(ಜೂ.19): ಜಮ್ಮು ಮತ್ತು ಕಾಶ್ಮೀರದ ಬಿಜೆಪಿ-ಟಿಡಿಪಿ ಮೈತ್ರಿ ಸರ್ಕಾರ ಮುರಿದು ಬಿದ್ದಿದೆ. ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಏಕಾಏಕಿ ಹಿಂಪಡೆದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಮೆಹಬೂಬಾ ಮುಫ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಮೈತ್ರಿ ಕಡಿದುಕೊಂಡ ಬಳಿಕ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ನರಿಂದರನಾಥ್ ವೋಹ್ರಾ ಅವರನ್ನು ಭೇಟಿಯಾದ ಮುಫ್ತಿ, ತಮ್ಮ ರಾಜೀನಾಂಎ ಪತ್ರವನ್ನು ಸಲ್ಲಿಸಿದರು. ಇದಕ್ಕೂ ಮೊದಲು ನವದೆಹಲಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಕಣಿವೆಯಲ್ಲಿ ಶಾಂತಿ ಕಾಪಾಡುವಲ್ಲಿ ಮುಫ್ತಿ ವಿಫಲವಾಗಿದ್ದಾರೆ ಎಂದು ಆರೋಪಿಸಿದ್ದರು.
ಕೇಂದ್ರ ಸರ್ಕಾರದ ನಿರಂತರ ಬೆಂಬಲದ ಹೊರತಾಗಿಯೂ ಶಾಂತಿ ಮರುಸ್ಥಾಪನೆಗೆ ಮುಫ್ತಿ ಮುಂದಾಗಲಿಲ್ಲ ಎಂಬುದು ಬಿಜೆಪಿ ಆರೋಪವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಸಾರ್ವಭೌಮತೆಯನ್ನು ಕಾಪಾಡುವ ಮತ್ತು ರಾಜ್ಯದ ಹಿತದೃಷ್ಟಿಯಿಂದ ಪಿಡಿಪಿಗೆ ನೀಡಿದ್ದ ಬೆಂಬಲ ಹಿಂಪಡೆಯಲಾಗಿದೆ ಎಂದು ಬಿಜೆಪಿ ತಿಳಿಸಿದೆ.
ಬಿಜೆಪಿಯ ಈ ದಿಢೀರ್ ನಿರ್ಧಾರದಿಂದ ವಿಚಲಿತರಾದಂತೆ ಕಂಡು ಬಂದಿರುವ ಮಹಬೂಬಾ ಮುಫ್ತಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸದ್ಯ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.