ಕಾವೇರಿ ಅಣೆಕಟ್ಟು : ಮತ್ತೆ ತಮಿಳುನಾಡಿನಿಂದ ಖ್ಯಾತೆ

Published : Dec 09, 2018, 09:14 AM IST
ಕಾವೇರಿ ಅಣೆಕಟ್ಟು : ಮತ್ತೆ ತಮಿಳುನಾಡಿನಿಂದ ಖ್ಯಾತೆ

ಸಾರಾಂಶ

ಕಾವೇರಿ ನದಿಗೆ ಮತ್ತೊಂದು ಅಣೆಕಟ್ಟು ನಿರ್ಮಾಣ ಮಾಡುವ ಸಂಬಂಧ ಇದೀಗ ಮತ್ತೆ ತಮಿಳುನಾಡು ತನ್ನ ಖ್ಯಾತೆ ತೆಗೆದಿದೆ. ಮತ್ತೊಮ್ಮೆ ಸುಪ್ರೀಂಕೋರ್ಟ್ ಬಾಗಿಲು ಬಡಿದಿದೆ. 

ನವದೆಹಲಿ: ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ನಿರ್ಮಾಣ ಮಾಡಲು ಉದ್ದೇಶಿಸಿರುವ ಮೇಕೆದಾಟು ಜಲಾಶಯ ಯೋಜನೆಯನ್ನು ಶತಾಯಗತಾಯ ತಡೆಯಲೇಬೇಕು ಎಂದು ನಿರ್ಧರಿಸಿರುವ ತಮಿಳುನಾಡು ಈ ಸಂಬಂಧ ಸುಪ್ರೀಂಕೋರ್ಟಿಗೆ ಮೂರನೇ ಅರ್ಜಿಯನ್ನು ಸಲ್ಲಿಕೆ ಮಾಡಿದೆ. 

ಯೋಜನೆಗೆ ತಡೆ ನೀಡಬೇಕು, ಕರ್ನಾಟಕದ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರ‰ಣೆ  ನಡೆಸಬೇಕು ಎಂದು ಈ ಹಿಂದೆ ಎರಡು ಅರ್ಜಿಗಳನ್ನು ಸಲ್ಲಿಸಿದ್ದ  ತಮಿಳುನಾಡು ಇದೀಗ ಮೇಕೆದಾಟು ಯೋಜನೆ  ಕುರಿತು  ವಿಸೃತ ಯೋಜನಾ ವರದಿ ತಯಾರಿಸಲು ಅನುಮತಿ ನೀಡಿದ ಕೇಂದ್ರೀಯ ಜಲ ಆಯೋಗದ ಅಧ್ಯಕ್ಷ ಮಸೂದ್ ಹುಸೇನ್ ಅವರನ್ನು ಕಾವೇರಿ ನಿರ್ವಹ‰ಣ ಪ್ರಾಧಿಕಾರದಿಂದ ಕಿತ್ತೊಗೆಯಬೇಕು ಎಂದು ಕೋರಿಕೆ ಇಟ್ಟಿದೆ.

ಹುಸೇನ್ ಅವರು ಕಾವೇರಿ ಜಲ ನಿರ್ವಹ‰ಣಾ ಪ್ರಾಧಿಕಾರದ ಮುಖ್ಯಸ್ಥ ಹುದ್ದೆಯನ್ನು ಹೆಚ್ಚುವರಿಯಾಗಿ ವಹಿಸಿಕೊಂಡಿದ್ದಾರೆ. ಅವರನ್ನು ಬದಲಿಸಿ  ಸ್ವತಂತ್ರ ವ್ಯಕ್ತಿಯನ್ನು ನೇಮಕ ಮಾಡುವಂತೆ ಕೇಂದ್ರ ಜಲಸಂಪನ್ಮೂಲ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಸಲ್ಲಿಸಿದೆ. 

ಎರಡು ದಿನಗಳ ಹಿಂದಷ್ಟೇ ಮೇಕೆದಾಟು ಕುರಿತು ಒಂದು ದಿನದ ಅವೇಶನವನ್ನು ತಮಿಳುನಾಡು ನಡೆಸಿತ್ತು. ಅಲ್ಲಿ ಮೇಕೆದಾಟು ಯೋಜನಾ ವರದಿ ತಯಾರಿಗೆ ಅನುಮತಿ ಕೊಟ್ಟ ಹುಸೇನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಗ್‌ ನ್ಯೂಸ್‌, ಜಿಮೇಲ್‌ ನೇಮ್‌ ಬದಲಾಯಿಸುವ ಅವಕಾಶ ನೀಡಿದ ಗೂಗಲ್‌!
ಹೊಸ ವರ್ಷದ ಸಂಭ್ರಮಕ್ಕೆ ಬ್ರೇಕ್; ಚಿಕ್ಕಮಗಳೂರಿನ 22 ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ!