
ಚೆನ್ನೈ: ಬುಧವಾರ ತೆರೆ ಕಂಡಿರುವ ತಮಿಳು ಚಿತ್ರರಂಗದ ಪ್ರಸಿದ್ಧ ನಟ ವಿಜಯ್ ಅವರ ‘ಮರ್ಸಲ್’ ಸಿನಿಮಾದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳಾದ ಜಿಎಸ್ಟಿ ಹಾಗೂ ಡಿಜಿಟಲ್ ಇಂಡಿಯಾ ಬಗ್ಗೆ ಲೇವಡಿ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.
‘ಸಿಂಗಾಪುರದಲ್ಲಿ ಕೇವಲ ಶೇ.7 ರಷ್ಟು ಜಿಎಸ್ಟಿ ವಸೂಲಿ ಮಾಡಿದರೂ ಜನತೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತದೆ. ಆದರೆ ಭಾರತದಲ್ಲಿ ಶೇ.28 ಜಿಎಸ್ಟಿ ವಿಧಿಸುತ್ತಿದ್ದರೂ ಉಚಿತ ಚಿಕಿತ್ಸೆ ಸಿಗುತ್ತಿಲ್ಲ’ ಎಂದು ನಾಯಕ ನಟ ವಿಜಯ್ ಕ್ಲೈಮ್ಯಾಕ್ಸ್ ದೃಶ್ಯವೊಂದರಲ್ಲಿ ಡೈಲಾಗ್ ಹೊಡೆಯುತ್ತಾರೆ. ಇದೇ ಚಿತ್ರದ ಒಂದು ದೃಶ್ಯದಲ್ಲಿ ಹಾಸ್ಯ ನಟ ವಡಿವೇಲು ಡಿಜಿಟಲ್ ಇಂಡಿಯಾ ಯೋಜನೆ ಬಗ್ಗೆ ನಗೆಬುಗ್ಗೆ ಹಾರಿಸುತ್ತಾರೆ. ಇದು ತಮಿಳುನಾಡಿನ ಬಿಜೆಪಿ ಆಕ್ಷೇಪಕ್ಕೆ ಕಾರಣವಾಗಿದೆ.
ಜಿಎಸ್ಟಿ ಹಾಗೂ ಡಿಜಿಟಲ್ ಇಂಡಿಯಾ ಬಗ್ಗೆ ತಪ್ಪು ಕಲ್ಪನೆ ಮೂಡಿಸುವ ದೃಶ್ಯಗಳನ್ನು ತೆಗೆದುಹಾಕಬೇಕು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ತಮಿಳುಸಾಯ್ ಸೌಂದರರಾಜನ್ ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.