ಕರಾಳ ದಿನಕ್ಕೆ ಅನುಮತಿ ನೀಡಿ: ಎಂಇಎಸ್ ಮನವಿ

Published : Oct 24, 2017, 05:46 PM ISTUpdated : Apr 11, 2018, 12:38 PM IST
ಕರಾಳ ದಿನಕ್ಕೆ ಅನುಮತಿ ನೀಡಿ: ಎಂಇಎಸ್ ಮನವಿ

ಸಾರಾಂಶ

ನ.1ರಂದು ಕರಾಳ ದಿನಾಚರಣೆ ಹಾಗೂ ಸೈಕಲ್ ರ್ಯಾಲಿ ಮತ್ತು ನ.13ರಂದು ನಡೆಯಲಿರುವ ಮಹಾಮೇಳಾವಕ್ಕೆ ಅನುಮತಿ ನೀಡುವಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ ಪದಾಧಿಕಾರಿಗಳು ಪೊಲೀಸ್ ಆಯುಕ್ತಕೃಷ್ಣ ಭಟ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಬೆಳಗಾವಿ: ನ.1ರಂದು ಕರಾಳ ದಿನಾಚರಣೆ ಹಾಗೂ ಸೈಕಲ್ ರ್ಯಾಲಿ ಮತ್ತು ನ.13ರಂದು ನಡೆಯಲಿರುವ ಮಹಾಮೇಳಾವಕ್ಕೆ ಅನುಮತಿ ನೀಡುವಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ ಪದಾಧಿಕಾರಿಗಳು ಪೊಲೀಸ್ ಆಯುಕ್ತಕೃಷ್ಣ ಭಟ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಎಂಇಎಸ್ ಅಧ್ಯಕ್ಷ ದೀಪಕ ದಳವಿ ನೇತೃತ್ವದಲ್ಲಿ ಎಂಇಎಸ್ ಪದಾಧಿಕಾರಿಗಳು ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ, ಈ ಸಂಬಂಧ ಚರ್ಚೆ ನಡೆಸಿದರು.

ಸೈಕಲ್ ರ್ಯಾಲಿ ಹೊರಡುವ ಮಾರ್ಗವನ್ನು ನಿಗದಿಪಡಿಸಿ ಅನುಮತಿ ನೀಡಬೇಕು. ನ.13ರಂದು ನಡೆಸಲು ಉದ್ದೇಶಿಸಿರುವ ಮಹಾಮೇಳಾವಕ್ಕೆ ಅನುಮತಿ ನೀಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾಲೋಜಿ ಅಷ್ಟೇಕರ, ಪ್ರಕಾಶ ಮರಗಾಳೆ, ವಿಕಾಸ ಕಲಘಟಗಿ, ಮಹೇಶ ಜುವೇಕರ, ರಾಜು ಮರ್ವೆ, ರಾಜು ಪಾವಲೆ ಮೊದಲಾದವರು ಇದ್ದರು.

ಬಳಿಕ ಎಂಇಎಸ್ ಪದಾಧಿಕಾರಿಗಳು ಪಾಲಿಕೆ ಆಯುಕ್ತ ಶಶಿಧರ ಕುರೇರ್ ಅವರನ್ನು ಭೇಟಿಯಾಗಿ, ಟಿಳಕವಾಡಿಯ ವ್ಯಾಕ್ಸಿನ ಡಿಪೋ ಮೈದಾನದಲ್ಲಿ ಮಹಾಮೇಳಾವ ಸಂಘಟಿಸಲು ಅನುಮತಿ ನೀಡುವಂತೆ ಕೋರಿದ್ದಾರೆ.

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್