ರಾಜ್ಯೋತ್ಸವದಂದು ಬಂದೂಕು ತೋರಿಸಿದ ಎಂಈಎಸ್ ಕಾರ್ಯಕರ್ತನ ವಿರುದ್ದ ಪ್ರಕರಣ ದಾಖಲು

Published : Nov 02, 2016, 11:03 PM ISTUpdated : Apr 11, 2018, 01:00 PM IST
ರಾಜ್ಯೋತ್ಸವದಂದು ಬಂದೂಕು ತೋರಿಸಿದ ಎಂಈಎಸ್ ಕಾರ್ಯಕರ್ತನ ವಿರುದ್ದ ಪ್ರಕರಣ ದಾಖಲು

ಸಾರಾಂಶ

ನಿನ್ನೆ ರತ್ನಪ್ರಸಾದ ಪೋಷಕರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು ಯಾವುದೇ ಮಾಹಿತಿಯನ್ನು ನೀಡಿಲ್ಲವೆಂದು ತಿಳಿದು ಬಂದಿದೆ. ಅಲ್ಲದೆ ಇಂದು ಆರೋಪಿ  ರತ್ನಪ್ರಸಾದ ವಕೀಲರ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆಯಿದೆ.

ಬೆಳಗಾವಿ (ನ.03): ನಗರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ ಕೈಯಲ್ಲಿ ಪಿಸ್ತೂಲ್, ಡಬಲ್ ಬ್ಯಾರಲ್ ಗನ್ ಹಿಡಿದು ಕುದರೆ ಏರಿ ರಾಜ್ಯ ಸರ್ಕಾರಕ್ಕೆ ಸಡ್ಡು ಹೊಡೆದಿದ್ದ ಎಂಈಎಸ್ ಕಾರ್ಯಕರ್ತನ ವಿರುದ್ದ ಮಾರ್ಕೆಟ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆರೋಪಿಯನ್ನು ರತ್ನಪ್ರಸಾದ್ ಪವಾರ್ ಎಂದು ಗುರುತಿಸಲಾಗಿದ್ದು, ಪೊಲೀಸರು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿದ್ದಾರೆ. ಕಳೆದೆರಡು ದಿನದಿಂದ ತಲೆಮರೆಸಿಕೊಂಡಿರುವ ಆರೋಪಿ ಪವಾರ್, ಮಹರಾಷ್ಟ್ರ ಏಕೀಕರಣ ಸಮಿತಿಯ ಸಕ್ರಿಯ ಕಾರ್ಯಕರ್ತನಾಗಿದ್ದು, ಈತನ ವಿರುದ್ದ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಸೇರಿ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ನಿನ್ನೆ ರತ್ನಪ್ರಸಾದ ಪೋಷಕರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು ಯಾವುದೇ ಮಾಹಿತಿಯನ್ನು ನೀಡಿಲ್ಲವೆಂದು ತಿಳಿದು ಬಂದಿದೆ. ಅಲ್ಲದೆ ಇಂದು ಆರೋಪಿ  ರತ್ನಪ್ರಸಾದ ವಕೀಲರ ಮೂಲಕ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆಯಿದೆ.

ಅದೇ ದಿನ ಪೊಲೀಸ್ ಜೊತೆ ಅಸಭ್ಯವಾಗಿ ವರ್ತಿಸಿದ ಎಂಈಎಸ್ ಕಾರ್ಯಕರ್ತರ ವಿರುದ್ದ ಶಹಪೂರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆ ಆರೋಪಿಗಳನ್ನು ಸಹ ಪೊಲೀಸರು ಇನ್ನು ಬಂಧಿಸದೇ ಇರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ