
ಬೆಂಗಳೂರು : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಬೆಳೆಯುತ್ತಲೇ ಇದ್ದು, ಪ್ರಭಾವಿಗಳ ಪುತ್ರರು ಒಂದೇ ಕ್ಷೇತ್ರದ ಟಿಕೆಟ್ಗಾಗಿ ಪೈಪೋಟಿಗೆ ಮುಂದಾಗಿರುವ ಕ್ಷೇತ್ರಗಳ ಪಟ್ಟಿಗೆ ಈಗ ಮಲ್ಲೇಶ್ವರ ಸೇರ್ಪಡೆಯಾಗಿದೆ.
ಮಲ್ಲೇಶ್ವರ ಕ್ಷೇತ್ರದ ಟಿಕೆಟ್ಗಾಗಿ ಸಚಿವ ಎಂ.ಆರ್. ಸೀತಾರಾಂ ಅವರ ಪುತ್ರ ರಕ್ಷಾ ಸೀತಾರಾಂ ಹಾಗೂ ಕಳೆದ ಬಾರಿಯ ಅಭ್ಯರ್ಥಿ ಬಿ.ಕೆ. ಶಿವರಾಂ ಅವರ ಪುತ್ರ ರಕ್ಷಿತ್ ಶಿವರಾಂ ಅರ್ಜಿಯನ್ನು ಕೆಪಿಸಿಸಿ ಕಚೇರಿಯಿಂದ ಪಡೆದುಕೊಂಡಿದ್ದಾರೆ.
ಕುತೂಹಲಕಾರಿ ಸಂಗತಿಯೆಂದರೆ, ಇದೇ ಕ್ಷೇತ್ರಕ್ಕೆ ಬಿ.ಕೆ. ಶಿವರಾಂ ಕೂಡ ಅರ್ಜಿ ಪಡೆದುಕೊಂಡಿದ್ದಾರೆ. ಇನ್ನು ಲೈಂಗಿಕ ಹಗರಣಕ್ಕೆ ಸಿಲುಕಿ ಸಚಿವ ಸ್ಥಾನ ಕಳೆದುಕೊಂಡ ಎಚ್.ವೈ. ಮೇಟಿ ಅವರು ಬಾಗಲಕೋಟೆ ಕ್ಷೇತ್ರದ ಟಿಕೆಟ್ಗಾಗಿ ಅರ್ಜಿ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.