
ವಿಜಯಪುರ: ಮಾಜಿ ಸಚಿವ ಮೇಟಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಂತ್ರಸ್ತೆ ಪ್ರತಿಕ್ರಿಯೆ ನೀಡಿದ್ದಾರೆ.
ನನ್ನ ಹಿಂದೆ ಯಾವುದೇ ಕಾಣದ ಕೈಗಳ ಕೆಲಸ ಇಲ್ಲ, ಸಿಎಂ ಸಾಹೇಬ್ರೆ ನನಗೆ ನ್ಯಾಯ ಕೊಡಿಸಲಿ, ಎಂದು ಸಂತ್ರಸ್ತೆ ಹೇಳಿದ್ದಾರೆ.
ಒಂದು ಹೆಣ್ಮಗಳಿಗೆ ಅನ್ಯಾಯವಾಗಿದೆ, ಸಿಎಂ ಅದಕ್ಕೆ ನ್ಯಾಯಕೊಡಿಸಲಿ. ನಾನು ಯಾವುದೇ ಒತ್ತಡಕ್ಕೆ ಮಣಿದಿಲ್ಲ, ಎಂದು ಅವರು ಹೇಳಿದ್ದಾರೆ.
ನನ್ನನ್ನು ಸ್ವತಃ ಮೇಟಿ ಬೆಂಬಲಿಗರೇ ಅಪಹರಣ ಮಾಡಿದ್ದರು, ಅದಕ್ಕೆ ದೂರು ನೀಡಲು ತಡವಾಯ್ತು ಎಂದು ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.
ಇಂದು ವಿಜಯಪುರದಲ್ಲಿ ಮಾತನಾಡುತ್ತಾ, ಪ್ರಕರಣದಲ್ಲಿ ಈಗಾಗಲೇ ಮೇಟಿಗೆ ಕ್ಲೀನ್ ಚೀಟ್ ಸಿಕ್ಕಾಗಿದೆ. ಈಗ ಮತ್ತೆ ಮಹಿಳೆ ಆರೋಪ ಮಾಡುತ್ತಿರುವುದನ್ನು ಗಮನಿಸಿದರೆ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.