
ಬೆಂಗಳೂರು (ಮಾ. 20): ಮೆಟ್ರೋ ನೌಕರರ ವಿರುದ್ಧ ಎಸ್ಮಾ ಜಾರಿ ತಡೆಯಾಜ್ಞೆ ತೆರವು ಕೋರಿ ಬಿಎಂಆರ್’ಸಿಎಲ್ ಮಧ್ಯಂತರ ಅರ್ಜಿ ಸಲ್ಲಿಸಿದೆ.
ಮೆಟ್ರೋ ನೌಕರರು ಮುಷ್ಕರ ಮಾಡಲು ಮುಂದಾಗಿದ್ದಾರೆ. ಎಸ್ಮಾ ಕಾಯ್ದೆಯ ಅಧೀನಕ್ಕೆ ಮೆಟ್ರೋ ಸಿಬ್ಬಂದಿಯನ್ನು ತರಲಾಗಿದೆ. ಸರ್ಕಾರ ಈ ಕುರಿತು ಅಧಿಸೂಚನೆ ಹೊರಡಿಸಿದೆ. ಹೀಗಾಗಿ ಎಸ್ಮಾ ಜಾರಿಗೆ ನೀಡಿರುವ ತಡೆಯಾಜ್ಞೆ ತೆರವಿಗೆ ಬಿಎಂಆರ್’ಸಿಎಲ್ ವಕೀಲರು ಹೈಕೋರ್ಟ್ ’ನಲ್ಲಿ ಮನವಿ ಸಲ್ಲಿಸಿದ್ದಾರೆ.
ಸರ್ಕಾರ ಪರ ಎಎಜಿ ಪೊನ್ನಪ್ಪ ವಾದ ಮಂಡನೆ ಮಾಡಿದ್ದಾರೆ. ಮೆಟ್ರೋ ಸಿಬ್ಬಂದಿ ಮುಷ್ಕರ ಬೆದರಿಕೆ ಒಡ್ಡಿ ಮಾತುಕತೆ ನಡೆಸುತ್ತಿರುವುದು ಸರಿಯಲ್ಲ. ಪ್ರತಿದಿನ ನಾಲ್ಕು ಲಕ್ಷ ಸಾರ್ವಜನಿಕರು ಮೆಟ್ರೋ ಅವಲಂಬಿಸಿದ್ದಾರೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.