ಬೆಂಗಳೂರಿನ ಮೆಟ್ರೋ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸುಂಕದಕಟ್ಟೆಯ ಮೆಟ್ರೋ ವಸತಿ ಗೃಹದಲ್ಲಿ ನಡೆದಿದೆ.
ಬೆಂಗಳೂರು(ಅ.05): ಬೆಂಗಳೂರಿನ ಮೆಟ್ರೋ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸುಂಕದಕಟ್ಟೆಯ ಮೆಟ್ರೋ ವಸತಿ ಗೃಹದಲ್ಲಿ ನಡೆದಿದೆ.
ಮೆಟ್ರೋ ಹಿರಿಯ ಅಧಿಕಾರಿಗಳ ವಿರುದ್ಧ ಕಿರಿಕುಳ ಆರೋಪ ಹಿನ್ನೆಲೆ ಮೆಟ್ರೋ ಸಿಬ್ಬಂದಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸಂತೋಷ್ ಕಳೆದ ಮೂರು ವರ್ಷಗಳಿಂದ ಮೆಟ್ರೋದಲ್ಲಿ ಕೆಲಸ ಮಾಡತ್ತಿದ್ದು, ಹಿರಿಯ ಅಧಿಕಾರಿಗಳ ಕಿರಿಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪದಡಿ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.