ನೆರೆ ಸಂತ್ರಸ್ತರ ನೆರವಿಗೆ MRG ಸಂಸ್ಥೆ 1 ಕೋಟಿ ರೂ. ದೇಣಿಗೆ

Published : Aug 22, 2019, 08:42 PM ISTUpdated : Aug 22, 2019, 09:40 PM IST
ನೆರೆ ಸಂತ್ರಸ್ತರ ನೆರವಿಗೆ MRG ಸಂಸ್ಥೆ 1 ಕೋಟಿ ರೂ. ದೇಣಿಗೆ

ಸಾರಾಂಶ

ಭೀಕರ ಪ್ರವಾಹದಿಂದ ತತ್ತರಿಸಿರುವ ಕರ್ನಾಟಕ| ನೆರೆ ಸಂತ್ರಸ್ತರ ನೆರವಿಗೆ ಧಾವಿಸುತ್ತಿವೆ ಸಂಘ ಸಂಸ್ಥೆಗಳು| ನೆರೆ ಸಂತ್ರಸ್ತರ ನೆರವಿಗೆ ಧಾವಿಸಿದ ಹಾಸ್ಪಿಟಾಲಿಟಿ ಆ್ಯಂಡ್‌ ಇನ್‌ಫ್ರಾಸ್ಟ್ರಕ್ಷರ್‌ ಪ್ರೈವೇಟ್‌ ಲಿಮಿಟೆಡ್‌| ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಿದ MRG ಸಂಸ್ಥೆ| ಸಿಎಂ ಯಡಿಯೂರಪ್ಪ ಅವರಿಗೆ ಚೆಕ್ ನೀಡಿದ ಅಧ್ಯಕ್ಷ  ಕೆ ಪ್ರಕಾಶ್ ಶೆಟ್ಟಿ| 

ಬೆಂಗಳೂರು(ಆ.22): ಉತ್ತರ ಕರ್ನಾಟಕದಲ್ಲಿ ತಲೆದೂರಿರುವ ಭೀಕರ ಜಲಪ್ರಳಯ ಹಾಗೂ ನಿರಂತರ ಮಳೆಯಿಂದಾಗಿ ಮನೆ, ಆಸ್ತಿ ಕಳೆದುಕೊಂಡು ನಿರಾಶ್ರಿತರಾದ ಜನರ ನೆರವಿಗೆ ಹಾಸ್ಪಿಟಾಲಿಟಿ ಆ್ಯಂಡ್‌ ಇನ್‌ಫ್ರಾಸ್ಟ್ರಕ್ಷರ್‌ ಪ್ರೈವೇಟ್‌ ಲಿಮಿಟೆಡ್‌ ( MRG) ಮುಂದೆ ಬಂದಿದೆ.

ಹಾಸ್ಪಿಟಾಲಿಟಿ ಆ್ಯಂಡ್‌ ಇನ್‌ಫ್ರಾಸ್ಟ್ರಕ್ಷರ್‌ ಪ್ರೈವೇಟ್‌ ಲಿಮಿಟೆಡ್‌ ( MRG) ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಿದರು.

 ಹಾಸ್ಪಿಟಾಲಿಟಿ ಆ್ಯಂಡ್‌ ಇನ್‌ಫ್ರಾಸ್ಟ್ರಕ್ಷರ್‌ ಪ್ರೈವೇಟ್‌ ಲಿಮಿಟೆಡ್‌’ನ  ಅಧ್ಯಕ್ಷ  ಕೆ ಪ್ರಕಾಶ್ ಶೆಟ್ಟಿ ಮತ್ತು ವ್ಯವಸ್ಥಾಪಕ ನಿರ್ದೇಶಕ ಗೌರವ್ ಪಿ ಶೆಟ್ಟಿ ಅವರು ಇಂದು (ಗುರುವಾರ) ಖುದ್ದು ಸಿಎಂ ಅವರನ್ನು ಭೇಟಿ ಮಾಡಿ 1 ಕೋಟಿರೂ. ಚೆಕ್ ನೀಡಿದರು.
ಈ ಕುರಿತು ಮಾತನಾಡಿರುವ ಪ್ರಕಾಶ್ ಶೆಟ್ಟಿ ಸಂಕಷ್ಟದಲ್ಲಿರುವ ಕರುನಾಡಿನ ಜನತೆಗೆ ಸಕಲ ನೆರವು ನೀಡುವಲ್ಲಿ ಸಂಸ್ಥೆ ರಾಜ್ಯ ಸರ್ಕಾರದೊಂದಿಗೆ ಹೆಗಲು ಕೊಟ್ಟು ನಿಲ್ಲಲಿದೆ ಎಂದು ಹೇಳಿದ್ದಾರೆ.

ನಿರಾಶ್ರಿತರಿಗೆ ಶೀಘ್ರದಲ್ಲೇ ಮನೆಗಳ ನಿರ್ಮಾಣವೂ ಸೇರಿದಂತೆ ಎಲ್ಲ ಅಗತ್ಯ ನೆರವು ನೀಡಲು ಸಂಸ್ಥೆ ಬದ್ಧವಾಗಿದೆ ಎಂದು ಪ್ರಕಾಶ್ ಶೆಟ್ಟಿ ಭರವಸೆ ನೀಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Coriander Leaves Farming: ಇಷ್ಟು ಎಲೆಗೆ ಅಷ್ಟು ಯಾಕೆ ಕೊಡ್ತೀರಿ? ಸಣ್ಣ ಪಾಟ್‌ನಲ್ಲೇ ಕೊತ್ತುಂಬರಿ ಬೆಳೆಯಲು Tips
ಬೆಂಗಳೂರಿನ 2ನೇ ಏರ್‌ಪೋರ್ಟ್‌, ಗುರುತಿಸಿರೋ ಈ 3 ಸ್ಥಳಗಳಲ್ಲಿ ಯಾವುದು ಬೆಸ್ಟ್? ಅಧ್ಯಯನಕ್ಕೆ ಟೆಂಡರ್ ಕರೆದ ಸರ್ಕಾರ!