
ಬೆಂಗಳೂರು(ಫೆ.08): ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಬಿಸಿಯೂಟ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಇಂದು ರಾಜ್ಯಾದ್ಯಂತ ಬಿಸಿಯೂಟ ಬಂದ್ ಮಾಡುವ ಮೂಲಕ ಹೋರಾಟವನ್ನು ತ್ರೀವ್ರಗೊಳಿಸುವ ನಿರ್ಧಾರ ಕೈಗೊಂಡಿದ್ದಾರೆ.
ಮೈಕೊರೆಯುವ ಚಳಿಯಲ್ಲೂ ಅಹೋರಾತ್ರಿ ಪ್ರತಿಭಟನೆ ಮುಂದುವರೆಸಿದ್ದ ಮಹಿಳೆಯರಿಗೆ ಎಮ್'ಇ'ಪಿ ಪಕ್ಷದ ಕಾರ್ಯಕರ್ತರು ನಿನ್ನೆ ರಾತ್ರಿ 50 ಕ್ಕೂ ಹೆಚ್ಚು ಬೆಡ್ ಶೀಟ್ ವಿತರಿಸಿದರು. ಈ ವೇಳೆ ಚಳಿಗೆ ಬೇಸತ್ತಿದ್ದ ಮಹಿಳೆಯರು ಬೆಡ್ಶೀಟ್ಗಳಿಗೆ ತಾ ಮುಂದು, ನಾ ಮುಂದು ಅಂತ ಮುಗಿಬಿದ್ದರು. ಮಹಿಳೆಯರನ್ನೆಲ್ಲಾ ಕೂರಿಸಿ, ಒಬ್ಬೊಬ್ಬರಿಗೆ ಬೆಡ್ ಶೀಟ್ಗಳನ್ನು ಹಂಚಿದರು. ಕನಿಷ್ಟ ವೇತನ ಬೇಡಿಕೆ ಈಡೇರಿಸದ ಹಿನ್ನಲೆ ರಾಜ್ಯದ ವಿವಿಧ ಭಾಗಗಳಿಂದ ಬಂದಿರುವ ಬಿಸಿಯೂಟ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್ ಬಳಿ ಅಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ಕನಿಷ್ಠ ವೇತನ ಹತ್ತು ಸಾವಿರ ಮಾಡುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂಬುವುದು ಕಾರ್ಯಕರ್ತರ ಆಗ್ರಹವಾಗಿದೆ. ಇಂದು ಕೂಡ ರಾಜ್ಯದ ವಿವಿಧ ಭಾಗದಿಂದ ಕಾರ್ಯಕರ್ತೆಯರು ಆಗಮಿಸಲಿದ್ದು ಪ್ರತಿಭಟನೆ ಇನ್ನಷ್ಟೂ ತೀವ್ರಗೊಳ್ಳುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.