'ಕಾಂಗ್ರೆಸ್ಸಿಂದ ನ್ಯಾಯ ಸಿಗದಿದ್ರೆ ನನ್ನ ದಾರಿ ನನಗೆ'

Published : Sep 19, 2018, 11:43 AM IST
'ಕಾಂಗ್ರೆಸ್ಸಿಂದ ನ್ಯಾಯ ಸಿಗದಿದ್ರೆ ನನ್ನ  ದಾರಿ ನನಗೆ'

ಸಾರಾಂಶ

ನಿನ್ನೆ ಮೊನ್ನೆ ಬಂದವರಿಗೆಲ್ಲ ಸಚಿವ ಸ್ಥಾನ ಕೊಟ್ಟಿದ್ದಾರೆ. ಆದರೆ ಮೂರು ಬಾರಿ ಶಾಸಕನಾದರೂ ನನ್ನನ್ನು ಮಂತ್ರಿ ಮಾಡಿಲ್ಲ. ಇದು ಬೇಸರ ತರಿಸಿದ್ದು, ನ್ಯಾಯ ಸಿಗದಿದ್ದರೆ ಯಾವುದೇ ನಿರ್ಧಾರ ಕೈಗೊಳ್ಳಲು ಸಿದ್ಧ

ಬೆಂಗಳೂರು(ಸೆ.19): ಪಕ್ಷದ ನಾಯಕರಿಂದ ನ್ಯಾಯ ಸಿಗದಿದ್ದರೆ ನನ್ನ ದಾರಿ ನನಗೆ. ಕಾರ್ಯಕರ್ತರು ಸೂಚಿಸಿದರೆ ಬೇರೆ ಪಕ್ಷಕ್ಕೂ ಸೇರಲು ಸಿದ್ಧ ಎಂದು ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಮತ್ತೊಮ್ಮೆ ಹೇಳಿದ್ದಾರೆ.

ಮಂಗಳವಾರ ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ವಾಭಿಮಾನ ಕೊಂದುಕೊಂಡು ನಾನು ಪಕ್ಷದಲ್ಲಿ ಇರುವುದಿಲ್ಲ. ಪಕ್ಷಕ್ಕೆ ದುಡಿದವರಿಗೆ ಇಲ್ಲಿ ಬೆಲೆಯಿಲ್ಲ ಕಾಂಗ್ರೆಸ್ ಪಕ್ಷದಿಂದ ಮೂರು ಬಾರಿ ಶಾಸಕನಾಗಿದ್ದೇನೆ. ಆದರೆ ನಿನ್ನೆ ಮೊನ್ನೆ ಬಂದವರಿಗೆಲ್ಲ ಸಚಿವ ಸ್ಥಾನ ಕೊಟ್ಟಿದ್ದಾರೆ. ಆದರೆ ಮೂರು ಬಾರಿ ಶಾಸಕನಾದರೂ ನನ್ನನ್ನು ಮಂತ್ರಿ ಮಾಡಿಲ್ಲ. ಇದು ಬೇಸರ ತರಿಸಿದ್ದು, ನ್ಯಾಯ ಸಿಗದಿದ್ದರೆ ಯಾವುದೇ ನಿರ್ಧಾರ ಕೈಗೊಳ್ಳಲು ಸಿದ್ಧ’ ಎಂದರು. ‘ಕಳೆದ 35 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿರುವ ನನಗೆ ಸೂಕ್ತ ಸ್ಥಾನ ಸಿಗುತ್ತಿಲ್ಲ.

ಇದೀಗ ನಮ್ಮ ತಾಲೂಕನ್ನು ನಿರ್ಲಕ್ಷಿಸಲಾಗುತ್ತಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಹೆಚ್ಚು ಅನುದಾನ ಸಿಕ್ಕಿತ್ತು. ಆದರೆ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ಬಜೆಟ್ ಮಂಡನೆ ಮಾಡಿದ್ದರೂ ತಾಲೂಕಿಗೆ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ. ಇದರಿಂದ ಯಾವುದೇ ಕೆಲಸ ನಡೆಯುತ್ತಿಲ್ಲ. ಕ್ಷೇತ್ರದ ಜನರಿಗೆ ಮತ್ತು ಕಾರ್ಯಕರ್ತರಿಗೆ ಏನು ಉತ್ತರಿಸಬೇಕೆಂದೇ ತಿಳಿಯುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನನ್ನೊಂದಿಗೆ ಮಾತನಾಡಿದ್ದಾರೆ. ನ್ಯಾಯ ಕೊಡಿಸುವ ಭರವಸೆ ನೀಡಿದ್ದಾರೆ. ನ್ಯಾಯ ಸಿಗದಿದ್ದರೆ ನನ್ನ ದಾರಿ ನನಗೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೊಂಟ ಹಾಗೂ ತಲೆಯ ಮೇಲೆ ತಲವಾರು ಇರಿಸಿಕೊಂಡು ಬಾಲೆಯ ಬೆಲ್ಲಿ ಡಾನ್ಸ್‌: ವೀಡಿಯೋ ಭಾರಿ ವೈರಲ್
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!