
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಬಳಿಕ ಅಸಮಾಧಾನಗೊಂಡ ರಮೇಶ್ ಜಾರಕಿಹೊಳಿ ಅನೇಕ ದಿನಗಳಿಂದ ನಾಪತ್ತೆಯಾಗಿದ್ದಾರೆ. ನಿಗೂಢ ಸ್ಥಳಕ್ಕೆ ತೆರಳಿರುವ ಜಾರಕಿಹೊಳಿ ಅವರು ಇಂದು ನಡೆದ [ಡಿ.31] ತಂದೆಯ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೂ ಕೂಡ ಗೈರಾಗಿದ್ದಾರೆ.
ಕರವೇ ಮುಖಂಡ ಪ್ರವೀಣ್ ಶೆಟ್ಟಿ ಬಣವು ಲಕ್ಷ್ಮಣ ರಾವ್ ಜಾರಕಿಹೊಳಿ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜನೆ ಮಾಡಿತ್ತು. 7ನೇ ವರ್ಷದ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ರಮೇಶ್ ಜಾರಕಿಹೊಳಿ ಗೈರಾಗಿದ್ದರು.
ದಿನಾಂಕದ ಪ್ರಕಾರ ಶ್ರದ್ಧಾಂಜಲಿ ಏರ್ಪಡಿಸಲಾಗಿದ್ದು, ತಿಥಿಯ ಪ್ರಕಾರವಾಗಿ ಜನವರಿ 13ರಂದು ಕುಟುಂಬಸ್ಥರು ಶ್ರದ್ಧಾಂಜಲಿ ಮಾಡಲಿದ್ದಾರೆ. ಆದರೆ ಕರವೇ ಸದಸ್ಯರು ಡಿಸೆಂಬರ್ 31ರಂದೇ ಶ್ರದ್ಧಾಂಜಲಿ ಏರ್ಪಡಿಸಿದ್ದರು. ಆದರೆ ಈ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಜಾರಕಿಹೊಳಿ ಬ್ರದರ್ಸ್ ಗೈರಾಗಿದ್ದಾರೆ.
ಆದರೆ ಶ್ರದ್ಧಾಂಜಲಿ ಸಭೆಯಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರಾದ ಗೋಕಾಕ ನಗರಸಭೆ ಸದಸ್ಯರು ಭಾಗಿಯಾಗಿದ್ದರು. ಈ ನಿಟ್ಟಿನಲ್ಲಿ ತಂದೆಯ ಶ್ರದ್ದಾಂಜಲಿಗಿಂತ ರಾಜಕೀಯ ಪ್ರತಿಷ್ಟೆಯೇ ಜಾರಕಿಹೊಳಿ ಬ್ರದರ್ ಗೆ ಹೆಚ್ಚಾಯ್ತು ಎಂಬ ಪ್ರಶ್ನೆ ಸ್ಥಳೀಯ ವಲಯದಲ್ಲಿ ಕೇಳೀಬರುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.