
ದೆಹಲಿ(ನ.17): ಇಂದು ಬೆಳಗ್ಗೆ ರಾಷ್ಟ್ರದ ರಾಜಧಾನಿ ನವದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಲಘು ಭೂಕಂಪ ಸಂಭವಿಸಿದೆ. ಇದರಿಂದಾಗಿ ಜನ ಗಾಬರಿಗೊಂಡು ಮನೆಯಿಂದ ಹೊರ ಬಂದಿದ್ದಾರೆ.
ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದ್ದು, ಭೂಮಿಯಿಂದ 10 ಕಿ.ಮೀ. ಆಳದಲ್ಲಿ ಭೂಮಿ ಕಂಪಿಸಿದೆ. ಇಂದು ಮುಂಜಾನೆ 4.30ರ ಸುಮಾರಿಗೆ ದೆಹಲಿ, ಗುರಗಾಂವ್ ಮತ್ತು ಘಾಜಿಯಾಬಾದ್, ಹರಿಯಾಣ, ರಾಜಸ್ಥಾನ ನಡುವಿನ ಗಡಿ ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ.
ಭೂಕಂಪ ಕೇಂದ್ರ ಬಿಂದು ಹರಿಯಾಣದ ರೆವಾಡಿ ಜಿಲ್ಲೆಯ ಬಾವ್ಲಾದಲ್ಲಿ ದಾಖಲಾಗಿದೆ. ಈ ಪ್ರದೇಶ ದೆಹಲಿಯಿಂದ ಸುಮಾರು 100 ಕಿಮೀ ದೂರದಲ್ಲಿದೆ. ಭೂಕಂಪನದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎನ್ನಲಾಗ್ತಿದೆ. ಎಲ್ಲರೂ ನಿದ್ದೆಗೆ ಜಾರಿದ್ದರಿಂದ ಬಹಳಷ್ಟು ಜನರಿಗೆ ಭೂಕಂಪದ ಅನುಭವವಾಗಿಲ್ಲ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.