
ಮುಂಬೈ[ಜು.07]: ಮುಂಬೈ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ಡಿಯೋರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವ ವಹಿಸಲು ಮೂರು ಹಿರಿಯ ಸದಸ್ಯರ ಸಮಿತಿ ರಚಿಸುವಂತೆ ಸಲಹೆ ನೀಡಿದ್ದಾರೆ. ಮಿಲಿಂದ್ ರಾಷ್ಟ್ರ ರಾಜಕಾರಣದಲ್ಲಿ ತೊಡಗಿಸಿಕೊಳ್ಳುವ ಎಲ್ಲಾ ಲಕ್ಷಣಗಳು ದಟ್ಟವಾಗಿವೆ.
ಮತ್ತೋರ್ವ ಪ್ರಮುಖ ಕೈ ಮುಖಂಡ ರಾಜೀನಾಮೆ : ಹುದ್ದೆಗೆ ಗುಡ್ ಬೈ
ಜೂನ್ 26ರಂದು ರಾಹುಲ್ ಗಾಂಧಿಯನ್ನು ಭೇಟಿಯಾಗಿ ಮರಳಿದ್ದ ಬಳಿಕ ಮಿಲಿಂದ್ ರಾಜೀನಾಮೆ ಮಾತುಗಳನ್ನಾಡಿದ್ದರು. ಆದರೀಗ ಡಿಯೋರಾ ಕಾರ್ಯಾಲಯದಿಂದ ಜಾರಿಗೊಳಿಸಲಾದ ಪ್ರಕಟಣೆಯಲ್ಲಿ 'ರಾಜೀನಾಮೆ ವಿಚಾರವನ್ನು ಮಲ್ಲಿಕಾರ್ಜುನ ಖರ್ಗೆ ಹಾಗೂ ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಗಮನಕ್ಕೆ ತರಲಾಗಿದೆ' ಎಂದು ತಿಳಿಸಿದ್ದಾರೆ.
ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಮಿಲಿಂದ್ ಜುಲೈ 4ರಂದು ರಾಹುಲ್ ಗಾಂಧಿಯವರ ಮುಂಬೈ ಪ್ರವಾಸವನ್ನು ಆಯೋಜಿಸಿದ್ದರು ಎಂಬುವುದು ಗಮನಾರ್ಹ. ಲೋಕಸಭಾ ಚುನಾವಣೆಯ ಕೇವಲ ಒಂದು ತಿಂಗಳ ಮೊದಲು ಮಿಲಿಂದ್ ಡಿಯೋರಾರನ್ನು ಮುಂಬೈ ಕಾಂಗ್ರೆಸ್ ನ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಹೀಗಿರುವಾಗ ಚುನಾವಣೆಗೆ ತಯಾರಿ ನಡೆಸಲು ಅವರಿಗೆ ಸರಿಯಾದ ಸಮಯ ಸಿಕ್ಕಿರಲಿಲ್ಲ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬಂದಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.