
ಕೊಪ್ಪಳ (ಅ.01): ಕೊಪ್ಪಳದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಸಚಿವ ಬಸವರಾಜ ರಾಯರೆಡ್ಡಿ ಕಾರು ಗುಂಡಿಗೆ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ.
ಕೊಪ್ಪಳದ ಗಣೇಶ ನಗರದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸುವ ವೇಳೆ ಒಳಚರಂಡಿ ಕಾಮಗಾರಿಯ ಗುಂಡಿಗೆ ಸಚಿವರ ಕಾರು ಸಿಕ್ಕಿ ಹಾಕಿಕೊಂಡಿದೆ. ಸಾರ್ವಜನಿಕರು ಎಷ್ಟೇ ಪ್ರಯತ್ನಿಸಿದರೂ ಕಾರನ್ನು ಮೇಲೆತ್ತಲು ಸಾಧ್ಯವಾಗಿಲ್ಲ. ಕೊನೆಗೆ ಸಚಿವರು ಬೇರೊಂದು ಕಾರಿನಲ್ಲಿ ಹೊರಡಬೇಕಾಯಿತು.
ಬಳಿಕ ನಗರಸಭೆ ಜೆಸಿಬಿ ಮೂಲಕ ಇನ್ನೋವಾ ಕಾರನ್ನು ಹೊರತೆಗೆಯಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.