ಮೈತ್ರಿ ಸರ್ಕಾರದ ರೂವಾರಿ ಕುಮಾರಸ್ವಾಮಿ ಬಜೆಟ್ ಗೆ ಬರಲ್ವಂತೆ

Published : Jun 28, 2018, 03:44 PM IST
ಮೈತ್ರಿ ಸರ್ಕಾರದ ರೂವಾರಿ ಕುಮಾರಸ್ವಾಮಿ ಬಜೆಟ್ ಗೆ ಬರಲ್ವಂತೆ

ಸಾರಾಂಶ

ಜುಲೈ 5ರಂದು ಮಂಡನೆಯಾಗುತ್ತಿರುವ ರಾಜ್ಯ ಬಜೆಟ್ ಗೆ ಮೈತ್ರಿ ಸರ್ಕಾರದ ರೂವಾರಿ ಎಂದೇ ಹೆಸರು ಪಡೆದ ಡಿ.ಕೆ ಶಿವಕುಮಾರ್ ಅವರು ಗೈರಾಗಲಿದ್ದಾರೆ. 

ಬೆಂಗಳೂರು : ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್ ಮಂಡಿಸುವ ದಿನ ತಾವು ಸದನದಲ್ಲಿ ಭಾಗವಹಿಸುತ್ತಿಲ್ಲ ಎಂದಿದ್ದೀರಲ್ಲಾ ಎಂಬ  ಪ್ರಶ್ನೆಗೆ, ಪ್ರಮುಖ ಕಾರ್ಯಕ್ರಮ ನಿಮಿತ್ತ ಬಜೆಟ್ ಮಂಡನೆ ವೇಳೆ ಸದನದಲ್ಲಿ ಭಾಗಿಯಾಗಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ತಪ್ಪು ಅರ್ಥ ಕಲ್ಪಿಸುವುದು ಬೇಡ. 

ಆದರೆ, ಪ್ರಯಾಣಕ್ಕೆ ವಿಮಾನ ಬಳಸಿಯಾದರೂ ಕೆಲ ಗಂಟೆಯಾದರೂ ಬಜೆಟ್ ಮಂಡನೆ ವೇಳೆ ಇರಲು ಪ್ರಯತ್ನಿಸುತ್ತೇನೆ ಎಂದು ಶಿವಕುಮಾರ್ ಅವರು ತಿಳಿಸಿದರು.

ಇನ್ನು ಇದೇ ವೇಳೆ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಡಿಯೋ ಬಗ್ಗೆ ಪ್ರಸ್ತಾಪಿಸಿದ ಅವರು ಸರ್ಕಾರದ ಕಾಲಾವಧಿ ಬಗ್ಗೆ ಲೋಕಾಭಿರಾಮವಾಗಿ ಮಾತನಾಡಿರುವುದನ್ನು ಯಾರೋ ಕಿಡಿಗೇಡಿಗಳು ವಿಡಿಯೋ ಮಾಡಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. 

ಇದು ಲೋಕಾಭಿರಾಮವಾಗಿ ಆಡಿದ ಮಾತೇ ಹೊರತು ಅಧಿಕೃತ ಮಾತಲ್ಲ. ಇಂತಹ ಹೇಳಿಕೆಯಿಂದ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಬೆಂಗಳೂರು ಮನೆಯಿಂದ ಡೆಲಿವರಿ ಬಾಯ್ಸ್ ಕಳ್ಳತನ!
ನನಗೆ ಎಚ್ಚರಿಕೆ ಕೊಡೋ ಮುನ್ನ ಹುಷಾರ್, ಕಾಮನ್‌ಸೆನ್ಸ್ ಇಟ್ಟುಕೊಂಡು ಡೀಲ್ ಮಾಡಿ, ಪತ್ರ ಬರೆದವನಿಗೆ ಡಿಕೆಶಿ ವಾರ್ನಿಂಗ್!