ಉತ್ತರ ಕರ್ನಾಟಕ ಬಂದ್ ಬಿಜೆಪಿ ಪ್ರಾಯೋಜಿತ: ಡಿಕೆಶಿ

Published : Aug 01, 2018, 04:08 PM ISTUpdated : Aug 01, 2018, 04:32 PM IST
ಉತ್ತರ ಕರ್ನಾಟಕ ಬಂದ್ ಬಿಜೆಪಿ ಪ್ರಾಯೋಜಿತ: ಡಿಕೆಶಿ

ಸಾರಾಂಶ

ರಾಜ್ಯದಲ್ಲಿ ಮತ್ತೆ ಪ್ರತ್ಯೇಕ ರಾಜ್ಯ ಬೇಡಿಕೆ ಕೂಗು ಕೇಳಿಸುತ್ತಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಉತ್ತರ ಕನ್ನಡದ ಮಂದಿ ಸಿಟ್ಟಾಗಿದ್ದು, ಬಂದ್‌ಗೆ ಕರೆ ನೀಡಿದ್ದರು. ಆದರೆ, ಒಮ್ಮೆ ಎಲ್ಲವೂ ತಣ್ಣಗಾದಂತೆ ಭಾಸವಾಗುತ್ತಿದೆ. ಇದು ಬಿಜೆಪಿ ಪ್ರಾಯೋಜಿತ, ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಬೆಂಗಳೂರು[ಆ.01]: ಉತ್ತರ ಕರ್ನಾಟಕ ಬಂದ್ ಬಿಜೆಪಿ ನಾಯಕರ ಪ್ರಯೋಜಿತ ಕಾರ್ಯಕ್ರಮ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂದ್ ಹಿಂದೆ ಬಿಜೆಪಿ ನಾಯಕರಿದ್ದಾರೆ. ಬಿಜೆಪಿ ಮಾಡಿಸುತ್ತಿರುವ ಕಾರ್ಯಕ್ರಮವಿದು. ನಾವು ಅಖಂಡ ಕರ್ನಾಟಕದ ಪರ ಇದ್ದೇವೆ. ಆಡಳಿತಾತ್ಮಕ ದೃಷ್ಟಿಯಿಂದ ಬೆಳಗಾವಿಯನ್ನು ಎರಡನೇ ರಾಜಧಾನಿಯಾಗಿ ಮಾಡುತ್ತೇವೆಂದು ಸಿಎಂ ಹೇಳಿರಬಹುದು. ಬೆಳಗಾವಿ ಜಿಲ್ಲೆಯಲ್ಲಿ ಗಡಿ ಸಮಸ್ಯೆ ಬೇರೆ ಇದೆ. ಅಲ್ಲದೇ ಸುವರ್ಣ ಸೌಧವನ್ನ ಬಳಸಿಕೊಳ್ಳುವ ಸಲುವಾಗಿ ಎರಡನೇ ರಾಜಧಾನಿಯಾಗಿ ಘೋಷಣೆ ಮಾಡುತ್ತೇನೆಂದು ಮಾತನಾಡಿರಬಹುದು. ಇದನ್ನು ಸಮರ್ಥಿಸಲು ನಾನು ವಕ್ತಾರನಲ್ಲ ಎಂದರು.

ಸಿದ್ದು ಔತಣಕೂಟದಲ್ಲಿ ಯಾವುದೇ ವಿಶೇಷವಿಲ್ಲ
ಮಾಜಿ ಸಿಎಂ ಸಿದ್ದರಾಮಯ್ಯ  ಅವರು ಸಚಿವರಿಗೆ ಔತಣಕೂಟ ಏರ್ಪಡಿಸಿದ ವಿಚಾರಕ್ಕೆ ಮಾತನಾಡಿದ ಅವರು, ಇದರಲ್ಲಿ ತಪ್ಪೇನು ಇಲ್ಲ. ಅವರು ಸಮನ್ವಯ ಸಮಿತಿ ಅಧ್ಯಕ್ಷರು. ಸಭೆಯಲ್ಲಿ ಪ್ರಣಾಳಿಕೆ ಬಗ್ಗೆ ಚರ್ಚೆ ಮಾಡುತ್ತೇವೆ. ಈ ಹಿಂದೆ ಶಾಸಕರಿಗೆ ಔತಣಕೂಟ ಏರ್ಪಡಿಸಿದ್ದರು. ಈಗ ಸಚಿವರಿಗೆ ಏರ್ಪಡಿಸಿದ್ದಾರೆ. ಇದರಲ್ಲಿ ವಿಶೇಷವೇನು ಇಲ್ಲ ಎಂದರು.

ಉಸ್ತುವಾರಿ ನೇಮಕಕ್ಕೆ ಯಾವುದೇ ಅಸಮಾಧಾನವಿಲ್ಲ
ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲಿ ಯಾವುದೇ ಅಸಮಧಾನವಿಲ್ಲ. ಎಲ್ಲರ ಜೊತೆ ಚರ್ಚಿಸಿಯೇ ಉಸ್ತುವಾರಿ ಸಚಿವರ ನೇಮಕ ಮಾಡಲಾಗಿದೆ. ಮೂರ್ನಾಲ್ಕು ಜಿಲ್ಲೆಗಳಲ್ಲಿ ಸ್ಥಳೀಯರನ್ನು ನೇಮಿಸಬೇಡಿ ಅಂದಿದ್ದರು. ಎರಡೂ ಪಕ್ಷದವರು ಕುಳಿತು ನೇಮಕ ಮಾಡಲಾಗಿದೆ. ಅರಣ್ಯ ಸಚಿವ ಶಂಕರ್ ಗೆ ಕಾಂಗ್ರೆಸ್ ಪಕ್ಷ ದೊಡ್ಡ ಗಿಫ್ಟ್ ನೀಡಿದೆ. ಮೊದಲನೇ ಬಾರಿ ಗೆದ್ದ ಇವರಿಗೆ ಪ್ರಬಲ ಖಾತೆ ನೀಡಲಾಗಿದೆ. ಕೆಲವೊಂದನ್ನು ಆಡಳಿತ ದೃಷ್ಟಿಯಿಂದ ನೇಮಕ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್
ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?