ಸಚಿವ ಡಿ.ಕೆ ಶಿವಕುಮಾರ್‌ಗೆ ಒಲಿಯಲಿದೆ ಉನ್ನತ ಸ್ಥಾನ

Published : Jun 15, 2018, 12:47 PM IST
ಸಚಿವ ಡಿ.ಕೆ ಶಿವಕುಮಾರ್‌ಗೆ ಒಲಿಯಲಿದೆ ಉನ್ನತ ಸ್ಥಾನ

ಸಾರಾಂಶ

ಸಚಿವ ಡಿಕೆ ಶಿವಕುಮಾರ್  ಅವರ ಆರಾಧ್ಯ ದೈವವಾದ ಕಾಡು ಸಿದ್ದೇಶ್ವರ ಮಠದ  ಶಿವಯೋಗಿ ಶ್ರೀಗಳು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ.  

ತುಮಕೂರು :  ಸಚಿವ ಡಿಕೆ ಶಿವಕುಮಾರ್  ಅವರ ಆರಾಧ್ಯ ದೈವವಾದ ಕಾಡು ಸಿದ್ದೇಶ್ವರ ಮಠದ  ಶಿವಯೋಗಿ ಶ್ರೀಗಳು ಅವರಿಗೆ ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ.  

ಡಿ.ಕೆ.ಶಿವಕುಮಾರ್ ಅವರು ಮಠದ ಮಗನಾಗಿ ಬೆಳೆದಿದ್ದಾರೆ. ಅವರು ಇಂತಹದ್ದೇ ಖಾತೆ ಬೇಕು ಎಂದು ಅಪೇಕ್ಷೆ ಪಡುವುದಿಲ್ಲ.  ಇನ್ನು ಅವರು ಆ ರೀತಿಯಾಗಿ ಅಪೇಕ್ಷೆ ಪಡುವುದೂ ಕೂಡ ಬೇಡ.  ಯಾವುದೇ ಖಾತೆ ಬಂದರೂ ಕೂಡ ಕಾಯಕವೇ ಕೈಲಾಸ ಎಂದು ನಿರ್ವಹಿಸಿಕೊಂಡು ಹೋಗಲಿ. ಇರುವ ಸ್ಥಾನದಲ್ಲೇ ಅವರು ಸಾಧನೆ ಮಾಡಲಿ ಎಂದು ಹೇಳಿದ್ದಾರೆ. 

ಮುಂದೊಂದು ದಿನ ಅವರು ಉನ್ನತ ಸ್ಥಾನಕ್ಕೆ ತಲುಪುತ್ತಾರೆ ಎಂದು ಕಾಡುಸಿದ್ದೇಶ್ವರ ಮಠದ ಶಿವಯೋಗಿ ಸ್ವಾಮೀಜಿ ‌ಸಲಹೆ ನೀಡಿದ್ದಾರೆ.  ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿ ಇರುವ ಕಾಡು ಸಿದ್ದೇಶ್ವರ ಮಠದ ಶಿವಯೋಗಿ ಶ್ರೀಗಳು ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಈ ರೀತಿಯ ಸಲಹೆ ನೀಡಿದ್ದಾರೆ. 

ಕಾಡು ಸಿದ್ದೇಶ್ವರ  ಡಿ.ಕೆ ಶಿವಕುಮಾರ್ ಅವರ ಆರಾಧ್ಯ ದೈವವಾಗಿದ್ದು, ಯಾವುದೇ ಕೆಲಸ ಕಾರ್ಯ ಕೈಗೊಳ್ಳುವ ಮೊದಲು ಅವರು ಶ್ರೀಗಳ ಆಶೀರ್ವಾದ ಪಡೆಯುತ್ತಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಪ್ಪು ಮಾಹಿತಿ ಕೊಟ್ಟಿದ್ರೆ ಹೆಬ್ಬಾಳ್ಕರ್‌ ವಿರುದ್ಧ ಹಕ್ಯುಚ್ಯುತಿ ಮಂಡಿಸಿ: ಡಿ.ಕೆ.ಶಿವಕುಮಾರ್‌
ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಕಾರು ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು