ದೆಹಲಿಯಲ್ಲಿ ಅಲ್ಲ 3 ಶಾಸಕರು ಮುಂಬೈನಲ್ಲಿದ್ದಾರೆ, ಡಿಕೆಶಿ ಹೇಳಿದ ಬೇರೆ ಕತೆ

Published : Jan 13, 2019, 05:20 PM ISTUpdated : Jan 13, 2019, 05:34 PM IST
ದೆಹಲಿಯಲ್ಲಿ ಅಲ್ಲ 3 ಶಾಸಕರು ಮುಂಬೈನಲ್ಲಿದ್ದಾರೆ, ಡಿಕೆಶಿ ಹೇಳಿದ ಬೇರೆ ಕತೆ

ಸಾರಾಂಶ

ಸಂಕ್ರಾಂತಿ ಹಬ್ಬ ಎದುರಾಗುತ್ತಿದ್ದಂತೆ ರಾಜ್ಯದಲ್ಲಿ ರಾಜಕಾರಣದ ಬೆಳವಣಿಗೆ ತೀವ್ರವಾಗಿದೆ. ಕೆಲ ರೆಬಲ್ ಶಾಸಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ ಎಂಬ ಸುದ್ದಿಗೆ ಸಂಬಂಧಿಸಿ ಪ್ರಭಾವಿ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು[ಜ.13]  ಯಾರೋ 3 ಜನ ಎಂಎಲ್ಎಗಳು ಮುಂಬೈಗೆ ಹೋಗಿದ್ದಾರೆ. ಆದರೆ ಅವರು ಯಾರು ಗೊತ್ತಿಲ್ಲ ಎಂದು ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಯಾವ ಹೊಟೇಲ್‌ನಲ್ಲಿ ಉಳಿದುಕೊಂಡಿದ್ದಾರೆ ಎನ್ನುವುದು ಗೊತ್ತಿದೆ. ಆದರೆ ಅವರ ಹೆಸರನ್ನು ಈ ಸಂದರ್ಭದಲ್ಲಿ ಬಹಿರಂಗ ಮಾಡುವುದಿಲ್ಲ ಎಂದು ಡಿಕೆಶಿ ಹೇಳಿದರು.

"

ಆಪರೇಷನ್ ಕಮಲ ಎನ್ನುತ್ತಾ  ಬಿಜೆಪಿಯವರು ಗೊಂದಲ, ಅಸ್ಥಿರತೆ ಎಲ್ಲಾ ಮೂಡಿಸುತ್ತಿದ್ದಾರೆ..ಮೂಹರ್ತ ಫಿಕ್ಸ್ ಮಾಡಿದ್ದಾರೆ‌. ಜೈಲಿಗೆ ಕಳಿಸಿಕೊಡ್ತೀನಿ ಅಂತ ಹೇಳಿ ಡೇಟ್ ಕೂಡ ಫಿಕ್ಸ್ ಮಾಡಿದ್ದರು. ಬಹಳ ಸಂತೋಷ ಎಂದು ವ್ಯಂಗ್ಯವಾಡಿದರು.

ಬೆಳೆ ಪರಿಹಾರಕ್ಕಾಗಿ ಡಿಕೆಶಿ ಕಾಲಿಗೆ ಬಿದ್ದ ರೈತ!

ದಿನೇಶ್ ಗುಂಡೂರಾವ್ ಈಗಾಗಲೇ ಎಸಿಬಿ, ಇನ್ ಕಮ್ ಟ್ಯಾಕ್ಸ್ ಗೆ ದೂರು ಕೊಟ್ಟಿದ್ದಾರೆ. ಯಾವ ರೀತಿಯ ಆಮಿಷಗಳನ್ನು ಒಡ್ಡಿದ್ದರು ಎಂಬ ಸಂಪೂರ್ಣ ಮಾಹಿತಿ ನಮ್ಮ ಬಳಿ ಇದೆ.  ಗಣೇಶ್ ಹುಕ್ಕೇರಿ ತಂದೆ ಸಂಸದರು, ಪಕ್ಷಕ್ಕೆ ನಿಷ್ಠೆ ಉಳ್ಳವರು. ಬಿಜೆಪಿಯವರ ಆಮಿಷಗಳ ಎಲ್ಲ ದಾಖಲೆ ನಮ್ಮ ಬಳಿ ಇದೆ. ಸಿಎಂ ಕುಮಾರಸ್ವಾಮಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಗೊತ್ತು. ಆದರೆ ಹೊರಗೆ ಹಾಕಿಲ್ಲ ಎಂದು ಹೇಳಿದರು. ನಾನೇ ಆಗಿದ್ದರೆ ಬಿಜೆಪಿಯವರ ಎಲ್ಲ ವಿಚಾರಗಳನ್ನು 24 ಗಂಟೆಯಲ್ಲಿ ಬಿಚ್ಚಿಡುತ್ತಿದ್ದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?