ಸಚಿವ ಡಿ.ಕೆ ಶಿವಕುಮಾರ್ ಯೂ ಟರ್ನ್ ..?

Published : Jun 23, 2018, 11:18 AM IST
ಸಚಿವ ಡಿ.ಕೆ ಶಿವಕುಮಾರ್ ಯೂ ಟರ್ನ್ ..?

ಸಾರಾಂಶ

  ನನ್ನ ಬಳಿ ಬಿಜೆಪಿ ನಾಯಕರ ಡೈರಿ ಇದೆ. ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುತ್ತೇನೆ ಎಂದು ಸವಾಲು ಹಾಕಿದ್ದ ಸಚಿವ ಡಿ.ಕೆ. ಶಿವಕುಮಾರ್ ಬಿಜೆಪಿಯ ಪ್ರತಿ ಸವಾಲಿಗೆ ಹಾರಿಕೆಯ ಉತ್ತರ ನೀಡಿದ್ದಾರೆ. 

ಬೆಂಗಳೂರು :  ನನ್ನ ಬಳಿ ಬಿಜೆಪಿ ನಾಯಕರ ಡೈರಿ ಇದೆ. ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುತ್ತೇನೆ ಎಂದು ಸವಾಲು ಹಾಕಿದ್ದ ಸಚಿವ ಡಿ.ಕೆ. ಶಿವಕುಮಾರ್ ಬಿಜೆಪಿಯ ಪ್ರತಿ ಸವಾಲಿಗೆ ಹಾರಿಕೆಯ ಉತ್ತರ ನೀಡಿದ್ದಾರೆ. ನನ್ನ ಬಳಿ ಬಿಜೆಪಿ ಡೈರಿ ಇದೆ, ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುತ್ತೇನೆ ಎಂದು ಈ ಹಿಂದೆ ಡಿಕೆಶಿ ಹೇಳಿದ್ದರು. 

ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಕೂಡಲೇ ಬಹಿರಂಗಪಡಿಸಲಿ ಎಂದು ಸವಾಲು ಹಾಕಿತ್ತು. ಬಿಜೆಪಿ ಆಗ್ರಹದ ಬಗ್ಗೆ ಸದಾಶಿವನಗರದ ತಮ್ಮ ನಿವಾಸದ ಬಳಿ ಶುಕ್ರವಾರ ಮಾತನಾಡಿದ ಅವರು, ನನ್ನ ಬಳಿ ಡೈರಿ ಇದೆಯೋ ಇಲ್ಲವೋ ನನಗೆ ಗೊತ್ತಿದೆ. ಇದೆ ಅಥವಾ ಇಲ್ಲ ಎನ್ನುವ ವಿಚಾರ ಈಗ ಬೇಡ. 

ಎಲ್ಲದಕ್ಕೂ ಸಮಯ ಬರುತ್ತದೆ, ಕಾಲವೇ ಉತ್ತರ ನೀಡುತ್ತದೆ ಎಂದು ಹೇಳಿದರು.ಅಲ್ಲದೆ, ತಮ್ಮ ಬಳಿ ಇದೆ ಎಂದಿದ್ದ ಡೈರಿ ವಿಚಾರದ ಬದಲು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಚುನಾವಣೆ ವೇಳೆ ಬಿಡುಗಡೆ ಮಾಡಿದ್ದ ಡೈರಿಯ ಬಗ್ಗೆ ತನಿಖೆ ನಡೆಸಲಿ ಎಂದು ಮತ್ತೊಂದು ಸವಾಲು ಹಾಕಿದರು. ದಿನೇಶ್ ಗುಂಡೂರಾವ್ ಡೈರಿ ಬಹಿರಂಗಗೊಳಿಸಿದ್ದರು. ಅದರಲ್ಲಿ ಲೆಹರ್ ಸಿಂಗ್ ಸೇರಿದಂತೆ ಹಲವರ ಮಾಹಿತಿ ಇತ್ತು. ಬಿಜೆಪಿಯವರು ಆ ಡೈರಿ ವಿಚಾರವೇಕೆ ಪ್ರಸ್ತಾಪ ಮಾಡು ತ್ತಿಲ್ಲ? ಆ ಡೈರಿ ಬಗ್ಗೆ ಏಕೆ ತನಿಖೆ ನಡೆಯುತ್ತಿಲ್ಲ? ಬಿಜೆಪಿ ಮುಖಂಡರಿಗೆ ಅದರಲ್ಲಿ ಯಾರ ಹೆಸರು ಪ್ರಸ್ತಾಪವಾಗಿತ್ತು ಎಂಬುದು ಗೊತ್ತಿಲ್ಲವೇ ಎಂದರು.

ಡೈರಿ ಇದ್ದರೆ ತನಿಖೆಗೆ ನೀಡಲಿ: ಶೋಭಾ ಸಚಿವ ಡಿ.ಕೆ.ಶಿವಕುಮಾರ್ ಬಳಿ ನಮ್ಮ ಪಕ್ಷದ ಮುಖಂಡರಿಗೆ ಸಂಬಂಧಿಸಿದ ಡೈರಿ ಇದ್ದರೆ ಸಂಬಂಧಪಟ್ಟ ಇಲಾಖೆಗೆ ನೀಡಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಸವಾಲು ಎಸೆದಿದ್ದಾರೆ. ಡೈರಿಯನ್ನು ಯಾರು ಬೇಕಾದರೂ ಸೃಷ್ಟಿ ಮಾಡ ಬಹುದು. ಆದರೆ, ಅದರ ಬಗ್ಗೆ ತನಿಖೆ ಎದುರಿ ಸಬೇಕು. ಅದಕ್ಕೆ ನಾವು ಸಿದ್ಧ. ಸಚಿವ ಶಿವಕುಮಾರ್ ಹೇಳಿದ ರೀತಿ ಅವರ ಬಳಿ ಡೈರಿ ಇದ್ದರೆ ಸಂಬಂಧ ಪಟ್ಟ ಇಲಾಖೆಗಳಿಗೆ ನೀಡಲಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನಲ್ಲಿ ಊಬರ್‌ ಕ್ರಾಂತಿಯ ಹೆಜ್ಜೆ, B2B ಲಾಜಿಸ್ಟಿಕ್ಸ್, ಮೆಟ್ರೋ ಟಿಕೆಟ್‌ ಕೂಡ ಲಭ್ಯ!
ದೆವ್ವಗಳ ಬಗ್ಗೆ ಪಿಎಚ್‌ಡಿ ಮಾಡಲಿದ್ದಾರೆ ಬಾಗೇಶ್ವರ ಬಾಬಾ ಧೀರೇಂದ್ರ ಶಾಸ್ತ್ರಿ! ಘೋಸ್ಟ್ ಬಗ್ಗೆ ತಿಳಿಯಲು ನಿಮಗೆ ಆಸಕ್ತಿ ಇದೆಯೇ?